ಕಾಂತಾರ: ಚಾಪ್ಟರ್ 2 ಮಾಡುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರಿಷಬ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.
ಮೈಸೂರಿಗೆ ಭೇಟಿ ನೀಡಿದ್ದ ರಿಷಬ್ ಶೆಟ್ಟಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಮುಂಬರುವ ಚಿತ್ರವನ್ನು ಪ್ರಶಾಂತ್ ವರ್ಮಾ ನಿರ್ದೇಶಿಸಲಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರ ನಿರ್ಮಿಸಲಿದೆ. ನನ್ನ ಮುಂದಿನ ಚಿತ್ರ ಜೈ ಹನುಮಾನ್. ಇದು ಸದ್ಯ ನಾನು ಕೆಲಸ ಮಾಡುತ್ತಿರುವ ಏಕೈಕ ಯೋಜನೆಯಾಗಿದೆ ಎಂದು ಖಚಿತಪಡಿಸಿದರು.
‘ಈ ಕಥೆ ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದೆ. ನನಗೆ ದೈವಿಕತೆಯ ಮೇಲೆ ಅಪಾರ ನಂಬಿಕೆ ಇದೆ. ಈ ಚಿತ್ರವು ಆ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ನನ್ನ ಸೃಜನಶೀಲ ಪಯಣದ ಪ್ರತಿಯೊಂದು ಹೆಜ್ಜೆಯೂ ಭಕ್ತಿ ಮತ್ತು ಶಿಸ್ತಿನಿಂದ ಪ್ರೇರಿತವಾಗಿರುತ್ತದೆ’ ಎಂದು ಅವರು ಹೇಳಿದರು.
ಜೈ ಹನುಮಾನ್ ತೆಲುಗಿನಲ್ಲಿ ಚಿತ್ರೀಕರಣವಾಗಲಿದ್ದು, ರಿಷಬ್ ಹನುಮನ ಪಾತ್ರದಲ್ಲಿ ನಟಿಸಲಿದ್ದಾರೆ. ಜೈ ಹನುಮಾನ್ ಚಿತ್ರವು 2024ರಲ್ಲಿ ಬಿಡುಗಡೆಯಾದ ‘ಹನುಮಾನ್’ ಚಿತ್ರದ ಮುಂದುವರಿದ ಭಾಗವಾಗಿದೆ. ಹನುಮಾನ್ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಕಂಡಿತ್ತು. ಚಿತ್ರದಲ್ಲಿ ತೇಜ್ ಸಜ್ಜಾ, ಅಮೃತಾ ಅಯ್ಯರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
—-





Be the first to comment