‘ಆಂಧ್ರ ಕಿಂಗ್ ತಾಲೂಕಾ’ ಬಿಡುಗಡೆಯ ಸಂದರ್ಭದಲ್ಲಿ ಸೂಪರ್ಸ್ಟಾರ್ ಉಪೇಂದ್ರ ಹೊಸ ಚಿತ್ರ ನಿರ್ದೇಶನ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ‘ತಮ್ಮ ನಿರ್ದೇಶನದಲ್ಲಿ ಹೊಸ ಚಿತ್ರ ಯಾವಾಗ’ ಎಂಬ ಪ್ರಶ್ನೆಗೆ ಉಪ್ಪಿ ಉತ್ತರಿಸಿದ್ದಾರೆ. ‘ಕೆಲವು ಕಥೆಗಳ ಮೇಲೆ ಕೆಲಸ ನಡೆಯುತ್ತಿದೆ. ಅದು ಚೆನ್ನಾಗಿದ್ದರೆ ಮತ್ತು ಅಂತಿಮವಾದರೆ ನಾನು ಅದನ್ನು ಘೋಷಿಸುತ್ತೇನೆ’ ಎಂದು ಉಪೇಂದ್ರ ಹೇಳಿದ್ದಾರೆ.
ಉಪೇಂದ್ರಗೆ ಕರ್ನಾಟಕದಲ್ಲಿ ಇರುವಂತೆ ತೆಲುಗಿನಲ್ಲೂ ದೊಡ್ಡ ಅಭಿಮಾನಿ ವರ್ಗ ಇದೆ. ಉಪೇಂದ್ರ ದಶಕಗಳ ಹಿಂದೆ ತೆಲುಗು ಸಿನಿಮಾವನ್ನುನಿರ್ದೇಶನ ಮಾಡಿದ್ದರು. ಅದೇ ಸಮಯದಲ್ಲಿ ಚಿರಂಜೀವಿ ಅವರ ಸಿನಿಮಾವನ್ನೂಅವರು ನಿರ್ದೇಶಿಸಬೇಕಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಆದರೆ ಈಗ ಅವಕಾಶ ಸಿಕ್ಕರೆ ನಿರ್ದೇಶನ ಮಾಡುವುದಾಗಿ ಉಪ್ಪಿ ಹೇಳಿದ್ದಾರೆ.
‘ಚಿರಂಜೀವಿ ಜೊತೆ ಸಿನಿಮಾ ಮಾಡಬೇಕೆಂದು ದೊಡ್ಡ ಕನಸು. ಎಲ್ಲವೂ ಸರಿಯಾದರೆ, ನಾನು ಖಂಡಿತವಾಗಿಯೂ ಸಿನಿಮಾ ಮಾಡುತ್ತೇನೆ’ ಎಂದಿದ್ದಾರೆ.
ಎನರ್ಜಿಟಿಕ್ ಸ್ಟಾರ್ ರಾಮ್ ಪೋತಿನೇನಿ ಅವರು ಬಹುನಿರೀಕ್ಷಿತ ಚಿತ್ರ ‘ಆಂಧ್ರ ಕಿಂಗ್ ತಾಲೂಕಾ’ ನವೆಂಬರ್ 27 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚಿತ್ರವನ್ನು ಮಹೇಶ್ ಬಾಬು ಪಿ ನಿರ್ದೇಶಿಸುತ್ತಿದ್ದಾರೆ. ಭಾಗ್ಯಶ್ರೀ ಬೋರ್ಸೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಪ್ಪಿ ಆನ್-ಸ್ಕ್ರೀನ್ ಸೂಪರ್ಸ್ಟಾರ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
—–





Be the first to comment