ಕನ್ನಡದಲ್ಲಿ ಹೊಸತಂಡದ ಹೊಸಪ್ರಯತ್ನವನ್ನು ಜನರು ಮೆಚ್ಚುಕೊಳ್ಳುತ್ತಿದ್ದಾರೆ. ಅದೇ ರೀತಿಯ ಹೊಸತಂಡವೊಂದರಿಂದ “ಗಾರ್ಜಿಯಸ್ ರಾಸ್ಕಲ್” ಎಂಬ ಚಿತ್ರ ಮೂಡಿಬಂದಿದೆ. ಇದೇ ಮಾರ್ಚ್ 6 ರಂದು ಚಿತ್ರ ತೆರೆಗೆ ಬರುತ್ತಿದೆ. ಅದೃಷ್ಟಲಕ್ಷ್ಮೀ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಚೇತನ್ ಕೃಷ್ಣ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ ಜೊತೆಗೆ ಸಂಗೀತವನ್ನು ಸಂಯೋಜಿಸಿದ್ದಾರೆ. ಚೇತನ್ ಕೃಷ್ಣ ಅವರು ಸಂಗೀತ ನೀಡಿರುವ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ತಮಿಳಿನ ಖ್ಯಾತ ಗಾಯಕ ವೇಲುಮುರುಗನ್ ಹಾಗೂ “ಸರಿಗಮಪ” ಖ್ಯಾತಿಯ ದರ್ಶನ್ ನಾರಾಯಣ್ ಹಾಡಿದ್ದಾರೆ. ಹಾಡುಗಳಿಗೆ ಕೇಳುಗರು ಫಿದಾ ಆಗಿದ್ದಾರೆ.
ಪ್ರಮೋದ್ ಜೋಯಿಸ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಶಂಕು ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನ, ನಂದು (ಕೆ.ಜಿ.ಎಫ್) ಅವರ ಶಬ್ದ ವಿನ್ಯಾಸ ಹಾಗೂ ಶ್ರೀನಿವಾಸ್ ಬೆಟ್ಟದಪುರ ಅವರ ಸಹ ನಿರ್ಮಾಣವಿದೆ. ಕ್ರಿಯೇಟಿವ್ ಹೆಡ್ ಆಗಿ ಚರಣ್ ಸುವರ್ಣ ಕಾರ್ಯ ನಿರ್ವಹಿಸಿದ್ದಾರೆ.

ಪ್ರೇರಣಾ ಭಟ್, ಯುವಿನ್, ರಾಜವೀರ್ ಸಿಂಗ್, ಚೇತನ್ ಮಹೇಶ್, ಶಕ್ತಿಕುಮಾರ್, ಸುನೀಲ್ ಪುರಾಣಿಕ್, ಸ್ವಾತಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿರುವ ಹಾಗೂ ಡಾರ್ಕ್ ಕಾಮಿಡಿ ಕಥಾ ಹಂದರರದ ಜೊತೆಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಇರುವ ನಮ್ಮ ಚಿತ್ರಕ್ಕೆ ಬೆಂಗಳೂರು ಹಾಗೂ ಮಹಾರಾಷ್ಟ್ರದಲ್ಲಿ ಚಿತ್ರೀಕರಣವಾಗಿದೆ. ಮಾರ್ಚ್ 6 ರಂದು “ಗಾರ್ಜಿಯಸ್ ರಾಸ್ಕಲ್” ತೆರೆಗೆ ಬರುತ್ತಿದೆ. ನನ್ನ ನಿರ್ಮಾಣದ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ಮಾಪಕ ಹಾಗೂ ಸಂಗೀತ ನಿರ್ದೇಶಕ ಚೇತನ್ ಕೃಷ್ಣ ಆರ್.





Be the first to comment