‘ವಿದಾತ್ರು’ ಕಿರುಚಿತ್ರಕ್ಕೆ ಸೈಮಾ ಕಿರುಚಿತ್ರೋತ್ಸವದಲ್ಲಿ 2 ಪ್ರಶಸ್ತಿಗಳು

ಇತ್ತೀಚೆಗೆ ತಮ್ಮ ಪ್ರತಿಭೇಗಳನ್ನು ತೋರಿಸಲು ಹಂಬಲವಿರುವ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಿರುಚಿತ್ರ. ಈಗ ಕಿರುಚಿತ್ರದ ಮೂಲಕ ತಮ್ಮ ಸಾಮರ್ಥ್ಯವನ್ನು ತೋರಿರುವ ಸಾಕಷ್ಟು ಪ್ರತಿಭೆಗಳು ಹಿರಿತೆರೆಗೂ ಪಾದಾರ್ಪಣೆ ಮಾಡುತ್ತಿದ್ದಾರೆ.

ಕೆಲವು ದಿಗಳ ಹಿಂದೆ ಸಂತೋಷ್.ಬಿ(ಸಂತು) ಅವರ ನಿರ್ದೇಶನದಲ್ಲಿ 27 ನಿಮಿಷಗಳ ‘ವಿದಾತ್ರು’ ಕಿರುಚಿತ್ರ ನಿರ್ಮಾಣವಾಗಿತ್ತು. ಇತ್ತೀಚೆಗೆ ಹೈದರಾಬಾದ್‍ನಲ್ಲಿ ನಡೆದ ಸೈಮಾ ಕಿರುಚಿತ್ರೋತ್ಸವದಲ್ಲಿ ‘ವಿದಾತ್ರು` ಎರಡು ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅತ್ಯುತ್ತಮ ನಿರ್ದೇಶನಕ್ಕಾಗಿ ಸಂತೋಷ್ ಅವರಿಗೆ ಹಾಗೂ ಅತ್ಯುತ್ತಮ ಪೆಷಕ ಪ್ರಧಾನ ಪಾತ್ರಕ್ಕಾಗಿ ನಾಗೇಂದ್ರ ಶಾ ಅವರಿಗೆ ಪ್ರಶಸ್ತಿ ಸಂದಿದೆ. ಅತ್ಯುತ್ತಮ ಚಲನಚಿತ್ರ, ಅತ್ಯುತ್ತಮ ನಿರ್ದೇಶನ, ಮುಖ್ಯ ಪಾತ್ರದಲ್ಲಿ ಅತ್ಯುತ್ತಮ ನಟ, ಅತ್ಯುತ್ತಮ ಹಾಸ್ಯನಟ, ಮಹಿಳಾ ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟಿ, ಪುರುಷ ಪ್ರಧಾನ ಪಾತ್ರದಲ್ಲಿ ಅತ್ಯುತ್ತಮ ಪೆಷಕ ನಟಿ ಸೇರಿದಂತೆ ಆರು ವಿಭಾಗಗಳಲ್ಲಿ ‘ವಿದಾತ್ರು` ಸರ್ಧಿಸಿತ್ತು. ಅದರಲ್ಲಿ 2 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.

ಅಪ್ಪ –ಮಗನ ಸಂಬಂಧದ ಬಗ್ಗೆಗಿನ ಕಥಾ ಹಂದರ ಹೊಂದಿರುವ ಈ ಕಿರುಚಿತ್ರವನ್ನು ಪೆನ್ಸಿಲ್ ಕಟ್ ಬ್ಯಾನರ್ ಲಾಂಛನದಲ್ಲಿ ನವೀನ್ ಎಸ್.ಪಿ ಹಾಗೂ ಆಶಾ ಎಚ್.ಎಸ್ ನಿರ್ಮಿಸಿದ್ದಾರೆ. ಕಾರ್ತಿಕ್ ಶರ್ಮ ಸಂಗೀತ ನಿರ್ದೇಶನ, ಆಶ್ಲೇ ಮೆಂಡೋಸಾ ಹಿನ್ನಲೆ ಸಂಗೀತ, ವಿಶ್ವಾಸ್ ಕೌಂಡಿನ್ಯ ಛಾಯಾಗ್ರಹಣ ಹಾಗೂ ಪ್ರಕಾಶ್ ಕಾರಿಂಜಾ ಅವರ ಸಂಕಲನ ಈ ಚಿತ್ರಕ್ಕಿದೆ. ವಿವೇಕ್ ಸಿಂಹ, ತೇಜಸ್ವಿನಿ ಶೇಖರ್, ನಾಗೇಂದ್ರ ಶಾ, ಪದ್ಮಕಲಾ, ನಿಸರ್ಗ, ಗಿರೀಶ್, ವಿನೋದ್ ಜ್ಯೋತಿನಗರ್, ಪುರುಷೋತ್ತಮ್, ರಾಘವೇಂದ್ರ, ಸುನಿಲ್ ಕುಲಕರ್ಣಿ ಮುಂತಾದವರು ಈ ಕಿರುಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!