ಈ ವಾರ ತೆರೆಗೆ “ವಿಜಯರಥ”

ವೃಕ್ಷ ಕ್ರಿಯೇಷನ್ಸ್ ಬ್ಯಾನರ್ಸ್ ಅಡಿಯಲ್ಲಿ, ರಮೇಶ್.ಎಸ್.ಆರ್ ಮಧುಗಿರಿ ನಿರ್ಮಿಸಿರುವ ಚೊಚ್ಚಲ ಚಿತ್ರ “ವಿಜಯರಥ” ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಅಜಯ್ ಸೂರ್ಯ ನಿರ್ದೇಶನದ “ವಿಜಯರಥ” ಚಿತ್ರವು ಹತ್ತು ಹಲವಾರು ಅಚ್ಚರಿಗಳ ಮೊತ್ತವಾಗಿದ್ದು, ಇದುವರೆಗೂ ಕನ್ನಡ-ತೆಲುಗು-ಹಿಂದಿ ಚಿತ್ರಗಳಿಗೆ ಸಹ-ನಿರ್ದೇಶನ ಮಾಡುತ್ತಾ, ಕೆಲವು ಚಿತ್ರಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ವಸಂತ್‍ಕಲ್ಯಾಣ್ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ವಿಶೇಷತೆಯೆಂಬಂತೆ ಕೆ.ಜಿ.ಎಫ್ ಚಿತ್ರ ಖ್ಯಾತಿಯ ಅರ್ಚನ ಪ್ರಥಮ ಬಾರಿಗೆ ಪೂರ್ಣ ಪ್ರಮಾಣದ ನಾಯಕಿಯಾಗಿ ನಟಿಸಿದ್ದು, ಅರ್ಪಿತಾಗೌಡ ರವರು ಮತ್ತೋರ್ವ ನಾಯಕಿಯಾಗಿ ನಟಿಸಿದ್ದಾರೆ, ರಾಜೇಶ್ ನಟರಂಗ, ಹನುಮಂತೇಗೌಡ, ನಿಹಾರಿಕಾ ಸೇರಿದಂತೆ ಅನುಭವಿ ಕಲಾವಿದರ ದಂಡೆ ಚಿತ್ರದಲ್ಲಿದೆ.

ಪ್ರೇಮ್‍ಕುಮಾರ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಎಸ್.ಎಲ್.ಚಂದ್ರು ಬರೆದಿದ್ದಾರೆ. `ಅಕಿರಾ` ಯೋಗಿ ಛಾಯಾಗ್ರಹಣ, ಸಿ.ರವಿಚಂದ್ರನ್ ಸಂಕಲನ, ಭೂಷಣ್ ನೃತ್ಯ ನಿರ್ದೇಶನ ಹಾಗೂ ಕುಂಗ್ಫು ಚಂದ್ರು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!