ಬಂಡೆಮಹಾಕಾಳಿ ದೇವಸ್ಥಾನದಲ್ಲಿ’ವೃಷಂಗ’.ಚಿತ್ರಕ್ಕೆ ಚಾಲನೆ

ಪಿಕ್ಚರ್ಸ್ ಕ್ರಿಯೇಷನ್ಸ್ ಲಾಂಛನದಲ್ಲಿ ಶ್ರೀಮತಿ ವಿಜಯಲಕ್ಷ್ಮೀ ರಾಮೇಗೌಡ ಮತ್ತು ಕುಮಾರಿ ಸಂಗೀತ ಎಸ್.ಆರ್ ಅವರು ನಿರ್ಮಿಸುತ್ತಿರುವ ‘ವೃಷಂಗ` ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಗವಿಪುರದ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಪ್ರಥಮ ಸನ್ನಿವೇಶಕ್ಕೆ ಶ್ರೀಮತಿ ವಿಜಯಲಕ್ಷ್ಮೀ ರಾಮೇಗೌಡ ಆರಂಭ ಫಲಕ ತೋರಿದರು. ರಂಗನಾಥ್ ಎಸ್.ಆರ್ ಕ್ಯಾಮೆರಾ ಚಾಲನೆ ಮಾಡಿದರು.

‘ರಮಣ ರಮಣಿ` ಚಿತ್ರಕ್ಕೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ಅನುಭವವಿರುವ ನಿರಂಜನ್ ರಂಗನಾಥ್ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮುತ್ತುರಾಜ್ ಈ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿ ಪ್ರಧಾನ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ಹೆಣ್ಣಿನ ಶೋಷಣೆಯ ಬಗ್ಗೆಗಿನ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಆರು ಹಾಡುಗಳಿರುವ ಈ ಚಿತ್ರಕ್ಕೆ ಸರ್ವೇಶ್ ಜೈನ್ ಸಂಗೀತ ನೀಡುತ್ತಿದ್ದಾರೆ. ನಾಲ್ಕು ಸಾಹಸ ಸನ್ನಿವೇಶಗಳಿದ್ದು, ವೈಲೆಂಟ್ ವೇಲು ಸಾಹಸ ನಿರ್ದೇಶನ ಮಾಡಲಿದ್ದಾರೆ. ಯೇಸುದಾಸ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ನಾಯಕರಾಗಿ ಹೇಮಂತ್ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಮಾನಸ, ಪೂಜ, ಚೇತನ್, ಆನಂದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

This Article Has 1 Comment
  1. Pingback: hentai sex doll

Leave a Reply

Your email address will not be published. Required fields are marked *

Translate »
error: Content is protected !!