ಶ್ರೀಸಾಯಿಬಾಬಾ ಸನ್ನಿಧಿಯಲ್ಲಿ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರಕ್ಕೆ ಚಾಲನೆ

ಕನ್ನಡ ಚಿತ್ರರಂಗದಲ್ಲಿ ಹಿಂದಿನ ಸುಮಧುರ ಹಾಡುಗಳ ಮೊದಲ ಸಾಲು ಸಾಕಷ್ಟು ಚಿತ್ರದ ಶೀರ್ಷಿಕೆಗಳಾಗಿವೆ. ಈಗ ಅ ಸಾಲಿಗೆ ಮತ್ತೊಂದು ಸೇರ್ಪಡೆ `ಎಲ್ಲಿಗೆ ಪಯಣ ಯಾವುದೋ ದಾರಿ`. ಪ್ರಸ್ತುತ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಪದ್ಮನಾಭನಗರದ ಶ್ರೀಸಾಯಿಬಾಬಾ ದೇವಸ್ಥಾನದಲ್ಲಿ ನೆರವೇರಿತು.

ಹಿರಿಯ ಪತ್ರಕರ್ತ ಶ್ರೀಗಣೇಶ್ ಕಾಸರಗೋಡು ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭಫಲಕ ತೋರುವುದರ ಮೂಲಕ ಚಾಲನೆ ನೀಡಿದರು.
ಸುದರ್ಶನ್ ಆರ್ಟ್ಸ್ ಲಾಂಛನದಲ್ಲಿ ನಂದೀಶ್ ಎಂ.ಸಿ.ಗೌಡ ಹಾಗೂ ಜತಿನ್ ಜಿ ಪಟೇಲ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಕಿರಣ್ ಸೂರ್ಯ ನಿರ್ದೇಶಿಸುತ್ತಿದ್ದಾರೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮಡಿಕೇರಿ ಸುತ್ತಮುತ್ತ 45ದಿನಗಳ ಚಿತ್ರೀಕರಣ ನಡೆಯಲಿದೆ.
ನಿರ್ದೇಶಕರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರದ ನಾಯಕನಾಗಿ ಅಭಿಮನ್ಯು ಕಾಶಿನಾಥ್ ಅಭಿನಯಿಸುತ್ತಿದ್ದಾರೆ. ಸ್ಪೂರ್ತಿ ಉಡಿಮನೆ, ವಿಜಯಶ್ರೀ, ಗಣೇಶ್ ನಾರಾಯಣ್, ರವಿಕುಮಾರ್, ದೇವು ರಂಗಭೂಮಿ, ಶೊಭ, ಕಿಶೋರ್, ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪತ್ರಕರ್ತ ಗಣೇಶ್ ಕಾಸರಗೋಡು ಅವರು ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಎರಡು ಹಾಡುಗಳಿರುವ ಈ ಚಿತ್ರಕ್ಕೆ ಗಣೇಶ್ ನಾರಾಯಣ್ ಸಂಗೀತ ನೀಡುತ್ತಿದ್ದಾರೆ. ಗೌತಮ್ ಮನು ಛಾಯಾಗ್ರಹಣ ಹಾಗೂ ರವಿಚಂದ್ರನ್, ಗಣೇಶ್ ಅವರ ಸಂಕಲನ ಈ ಚಿತ್ರಕ್ಕಿದೆ.

This Article Has 1 Comment
  1. Pingback: DevOps

Leave a Reply

Your email address will not be published. Required fields are marked *

Translate »
error: Content is protected !!