ಶುಕ್ರವಾರ ತೆರೆಗೆ ‘ಶ್ರೀ ಭರತ ಬಾಹುಬಲಿ’

ಐಶ್ವರ್ಯ ಫಿಲಂ ಪ್ರೊಡಕ್ಷನ್ಸ್ ಲಂಛನದಲ್ಲಿ ಶಿವಪ್ರಕಾಶ್.ಟಿ ಅವರು ನಿರ್ಮಿಸಿರುವ ‘ಶ್ರೀಭರತ ಬಾಹುಬಲಿ’ ಚಿತ್ರ ಈ ವಾರ ರಾಜ್ಯದ್ಯಂತ ಬಿಡುಗಡೆಯಾಗುತ್ತಿದೆ.
‘ಮಾಸ್ಟರ್ ಪೀಸ್’ ಖ್ಯಾತಿಯ ಮಂಜು ಮಾಂಡವ್ಯ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಗೀತರಚನೆ ಕೂಡ ಮಂಜು ಮಾಂಡವ್ಯ ಅವರದೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಪರ್ವೆಜ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಕಲೈ, ಮುರಳಿ ನೃತ್ಯ ನಿರ್ದೇಶನ, ಮಲ್ಲ, ಶಿವಕುಮಾರ್, ಅರುಣ್ ಸಾಗರ್ ಕಲಾ ನಿರ್ದೇಶನ ಹಾಗೂ ಮಾಸ್ ಮಾದ, ಎ.ವಿಜಯ್, ವಿನೋದ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿತ್ರದ ನಿರ್ದೇಶಕ ಮಂಜು ಮಾಂಡವ್ಯ, ಚಿಕ್ಕಣ್ಣ, ಶ್ರೇಯಾ ಶೆಟ್ಟಿ, ಸಾರಾ ಹರೀಶ್, ಶೃತಿಪ್ರಕಾಶ್, ಶ್ರೀನಿವಾಸಮೂರ್ತಿ, ಭವ್ಯ, ಅಚ್ಯುತರಾವ್, ಹರೀಶ್ ರಾಯ್, ಜಾನ್ ಕೊಕೇನ್, ಅಯ್ಯಪ್ಪ ಪಿ.ಶರ್ಮ ಕರಿಸುಬ್ಬು, ಪುಷ್ಪಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಶೇಷ ಪಾತ್ರದಲ್ಲಿ ನಟ ರಿಶಿ ಹಾಗೂ ಖ್ಯಾತ ನಟ ಚರಣ್‌ರಾಜ್ ಅವರ ಪುತ್ರ ತೇಜ್‌ರಾಜ್ ಅಭಿನಯಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!