ಏಪ್ರಿಲ್‌ನಲ್ಲಿ ‘ಅರ್ಜುನ್ ಗೌಡ’

ನಿರ್ಮಾಪಕ ರಾಮು ಅವರು ನಿರ್ಮುಸಿರುವ ‘ಅರ್ಜುನ್ ಗೌಡ` ಚಿತ್ರದ ಚಿತ್ರೀಕರಣ ಮುಕ್ತಾಯಾವಾಗಿದೆ. ನಾಯಕ ಪ್ರಜ್ವಲ್ ದೇವರಾಜ್ ಹಾಗೂ ಪ್ರಿಯಾಂಕ ಅಭಿನಯದ ಸನ್ನಿವೇಶವೊಂದನ್ನು ಅರುಣ್ ಸಿನಿ ಸರ್ವಿಸ್‌ನಲ್ಲಿ ಚಿತ್ರಿಸಿಕೊಳುವುದರೊಂದಿಗೆ ಚಿತ್ರದ ಚಿತ್ರೀಕರಣ ಸಮಾಪ್ತಿಯಾಗಿ ಕುಂಬಳಕಾಯಿ ಒಡೆಯಲಾಯಿತು ಎಂದು ನಿರ್ದೇಶಕರು ತಿಳಿಸಿದ್ದಾರೆ. ಒಟ್ಟು ೮೦ ದಿನಗಳ ಚಿತ್ರೀಕರಣ ನಡೆದಿದೆ. ಡಬ್ಬಿಂಗ್ ಸಹ ಪೂರ್ಣವಾಗಿದ್ದು, ಚಿತ್ರ ಏಪ್ರಿಲ್‌ನಲ್ಲಿ ತೆರೆಗೆ ಬರಲಿದೆ.

ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಶಂಕರ್ ನಿರ್ದೇಶಿಸಿದ್ದಾರೆ. ಈ ಚಿತ್ರಕ್ಕೆ ಧರ್ಮವಿಶ್ ಅವರ ಸಂಗೀತ ನಿರ್ದೇಶನವಿದೆ. ಜೈಆನಂದ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಮೋಹನ್, ರಾಜು ನೃತ್ಯ ನಿರ್ದೇಶನ, ಈಶ್ವರಿ ಕುಮಾರ್, ರತನ್ ಕಲಾ ನಿರ್ದೇಶನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜ್ವಲ್ ಅವರು ಈ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ಬಾಕ್ಸರ್ ಪಾತ್ರ ನಿರ್ವಹಿಸಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ. ಪ್ರಜ್ವಲ್ ದೇವರಾಜ್, ಪ್ರಿಯಾಂಕ ತಿಮ್ಮೇಶ್, ಸಾಧುಕೋಕಿಲ, ರಾಹುಲ್ ದೇವ್, ಸ್ಪರ್ಷ ರೇಖ, ಕಡ್ಡಿಪುಡಿ ಚಂದ್ರು, ಅರವಿಂದ್, ದೀಪಕ್ ಶೆಟ್ಟಿ, ಪ್ರಕಾಶ್, ಯಮುನ ಶ್ರೀನಿಧಿ, ಭಜರಂಗಿ ಚೇತನ್, ಜೀವ, ಸೂರಜ್, ದಿನೇಶ್ ಮಂಗಳೂರು, ಹನುಮಂತೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

This Article Has 1 Comment
  1. Pingback: Devops

Leave a Reply

Your email address will not be published. Required fields are marked *

Translate »
error: Content is protected !!