“ಬಾರಿಸು ಕನ್ನಡ ಡಿಂಡಿಮವ” ಪೋಸ್ಟರ್ ಬಿಡುಗಡೆ

ಈ ಹಿಂದೆ ಅಭಯ ಹಸ್ತ ಎಂಬ ವಿಭಿನ್ನ ಸಿನಿಮಾವನ್ನು ನಿರ್ದೇಶನ ಮಾಡಿದ್ದ ನವಿಲುಗರಿ ನವೀನ್. ಪಿ. ಬಿ ಈಗ ಹೊಸ ಕಥೆಯೊಂದಿಗೆ ಹೆಸರಾಂತ ಕನ್ನಡ ಶೀರ್ಷಿಕೆಯನ್ನು ಇಟ್ಟುಕೊಂಡು ಕನ್ನಡ ಭಾಷೆಯ ಉಳಿವಿನ ಬಗ್ಗೆ ಸಿನಿಮಾ ಡೈರೆಕ್ಟ್ ಮಾಡಲು ಒರಟಿದ್ದಾರೆ. ಹಳೆಯ ಅಭಯ ಹಸ್ತ ಸಿನಿಮಾದಲ್ಲಿ ಹೆಸರಾಂತ ಮುತ್ತಪ್ಪ ರೈ, ಜೇಡರಹಳ್ಳಿ ಕೃಷ್ಣಪ್ಪ, ಡಾ. ಶಿವರಾಜ್ ಕುಮಾರ, ನವೀನ್ ಕೃಷ್ಣ, ಅನಿರುದ್ದ್ ಇನ್ನೂ ಹಲವರು ಮುಖ್ಯ ಭೂಮಿಕೆಯಲ್ಲಿ ಬಣ್ಣ ಹಚ್ಚಿದ್ದರು, ಈ ಬಾರಿಸು ಕನ್ನಡ ಡಿಂಡಿಮವ ಸಿನಿಮಾದಲ್ಲಿ ಬಹುಪಾಲು ಮಕ್ಕಳನ್ನೇ ನಟನೆ ಮಾಡಿಸುವುದರ ಬಗ್ಗೆ ಮಾಹಿತಿ ನೀಡಿದ್ದಾರೆ ಡೈರೆಕ್ಟರ್. ಈ ಸಿನಿಮಾದಲ್ಲಿ 4 ಹಾಡುಗಳಿದ್ದು ಸಂಗೀತ ಸಂಯೋಜನೆಯನ್ನು ಹೊಸ ಪ್ರತಿಭೆ ಮನುರಾಜ್ ರವರು ನಿಭಾಯಿಸುತ್ತಿದ್ದಾರೆ, ಸಾಹಿತ್ಯವನ್ನು

ಈ ಸಿನಿಮಾಕ್ಕೆ ಅಶ್ವಿಕ ಮೈಸೂರು ರವರು ಬಂಡವಾಳ ಹೂಡಿಕೆ ಮಾಡುತ್ತಿದ್ದಾರೆ . ಈ ಚಿತ್ರದಲ್ಲಿ ಪ್ರೊ. ಡಾ. ದೊಡ್ಡರಂಗೇಗೌಡರು ಮುಖ್ಯ ಭೂಮಿಕೆಯಲ್ಲಿ ಅಭಿನಯಸುತ್ತಿದ್ದಾರೆ. ಉಳಿದಂತೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಅತಿ ಶೀಘ್ರದಲ್ಲಿ ನೀಡಲಿದೆಯಂತೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!