ಸತೀಶ್‌-ಶ್ರದ್ಧಾ ನಟನೆಯ ‘ಗೋದ್ರಾ’ ಚಿತ್ರಕ್ಕೆ ಟೈಟಲ್‌ ಬದಲಾವಣೆ!

ಸತೀಶ್‌ ನೀನಾಸಂ ಮತ್ತು ಶ್ರದ್ಧಾ ಶ್ರೀನಾಥ್‌ ನಟನೆಯ ‘ಗೋದ್ರಾ’ ಚಿತ್ರಕ್ಕೂ ಈಗ ಟೈಟಲ್‌ ಸಮಸ್ಯೆ ಎದುರಾಗಿದೆ!

ನಟ ಸತಿಸ್ ನೀನಾಸಂ ಮತ್ತು  ಶ್ರದ್ದಾ ಶ್ರೀನಾಥ್ ಅಭಿನಯಸಿರುವ ಈ ಚಿತ್ರವನ್ನು ನೋಡಿದ  ಸೆನ್ಸಾರ್ ಮಂಡಳಿ   ಅಧಿಕಾರಿಗಳು ಶೀರ್ಷಿಕೆ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ಹಾಗಾದರೆ ಈಗ ಚಿತ್ರಕ್ಕೆ ಟೈಟಲ್‌ ಬದಲಾವಣೆ ಆಗಲಿದೆಯಾ? ಈ ಎಲ್ಲ ವಿಷಯಗಳ ಬಗ್ಗೆ ಚಿತ್ರತಂಡ ಮಾಧ್ಯಮ ಪ್ರಕರಣೆ ಹೊರಡಿಸಿದೆ ಇಲ್ಲಿದೆ ನೋಡಿ

‘ನಾವು ಇತ್ತೀಚೆಗೆ ನಮ್ಮ ಸಿನಿಮಾವನ್ನು ಸಿಬಿಎಫ್‌ಸಿಯಿಂದ (ಸೆನ್ಸಾರ್‌ ಮಂಡಳಿ) ಪ್ರಮಾಣೀಕರಣಕ್ಕಾಗಿ ಅರ್ಜಿ ಸಲ್ಲಿಸಿದ್ದೇವೆ. ಮಂಡಳಿಯ ಸದಸ್ಯರು ನಮ್ಮ ಚಲನಚಿತ್ರವನ್ನು ವೀಕ್ಷಿಸಿದರು ಮತ್ತು ನಮ್ಮ ಸಿನಿಮಾದ ಶೀರ್ಷಿಕೆಯನ್ನು ಬದಲಾಯಿಸುವಂತೆ ಸೂಚಿಸಿದ್ದಾರೆ. ಮಂಡಳಿಯ ಸದಸ್ಯರಿಗೆ ಮತ್ತು ಅಧಿಕಾರಿಗಳಿಗೆ ನಮ್ಮ ಚಿತ್ರದ ನಿಲುವು, ಕಥಾವಸ್ತು ಮತ್ತು ನೇರವಂತಿಕೆಯ ಕೆಲವು ವಿಷಯಗಳ ಕುರಿತಾದ ಆಕ್ಷೇಪಣೆ ಇದೆ. ಅದಕ್ಕಾಗಿ ಶೀರ್ಷಿಕೆಯನ್ನು ಬದಲಾಯಿಸಬೇಕು ಎನ್ನುವ ಸಲಹೆ ಬಂದವು. ನೇರ ನಿಷ್ಠುರ ವಿಷಯಗಳು ಕೆಲವೊಮ್ಮೆ ಕಹಿಯಾಗಿರುತ್ತವೆ. ಗೋದ್ರಾದಲ್ಲಿ ನಡೆದ ಘಟನೆಗೂ ಮತ್ತು ನಮ್ಮ ಸಿನಿಮಾಗೂ ಯಾವುದೇ ಸಂಬಂಧವಿಲ್ಲ ಎಂದು ಮನವಿ ಮಾಡಿದರೂ, ಆ ಕುರಿತು ಅವರಿಗೆ ತಿಳಿಸಲು ಎಲ್ಲ ರೀತಿಯ ಪ್ರಯತ್ನ ಮಾಡಿದೆವು. ಆದರೆ, ನಮ್ಮ ಮನವಿಯನ್ನು ಅವರು ಪುರಸ್ಕರಿಸಲಿಲ್ಲ’

‘ಹಾಗಾಗಿ ಸೆನ್ಸಾರ್ ಅಧಿಕಾರಿಗಳ ಜತೆ ಚರ್ಚಿಸಿ ನಮ್ಮ ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಲು ತೀರ್ಮಾನ ತೆಗೆದುಕೊಂಡಿದ್ದೇವೆ. ಆದರೆ, ನಮ್ಮ ಚಿತ್ರತಂಡಕ್ಕೊಂದು ಅನುಮಾನ ಎದುರಾಗಿದೆ. ನಾವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ   (ಕೆಎಫ್‌ಸಿಸಿ) ಯಲ್ಲಿ ‘ಗೋದ್ರಾ’ ಎಂದು ನಮ್ಮ ಚಿತ್ರಕ್ಕೆ ಹೆಸರಿಡಲು ಅನುಮತಿ ಪಡೆದಿದ್ದೇವೆ. ಈ ಅನುಮೋದಿತ ಮತ್ತು ನೋಂದಾಯಿಸಿದ ಶೀರ್ಷಿಕೆಗೆ ಯಾವುದೇ ಸಿಂಧುತ್ವವಿಲ್ಲ ಎಂದು ಸಿಬಿಎಫ್‌ಸಿಯಿಂದ ಈಗ ನಮಗೆ ತಿಳಿದು ಆಘಾತವಾಯಿತು.ಕೆಎಫ್‌ಸಿಸಿ ಶೀರ್ಷಿಕೆಗಳನ್ನು ನೀಡಲು ಅಂತಹ ಯಾವುದೇ ಅಧಿಕಾರ ಹೊಂದಿರುವುದಿಲ್ಲ ಮತ್ತು ಅದು ಅನುಮತಿಸಿದ ಶೀರ್ಷಿಕೆಯನ್ನು ಸಿಬಿಎಫ್‌ಸಿ ಒಪ್ಪಬೇಕಿಲ್ಲ ಎಂದು ಮಂಡಳಿಯು ಹೇಳಿದಾಗ ಆಶ್ಚರ್ಯವಾಯಿತು.

‘ಗೋಧ್ರಾ ಎಂಬ ಶೀರ್ಷೀಕೆಯು ಆ ಸ್ಥಳದಲ್ಲಿ ನಡೆದ ಘಟನೆಗೆ ಸಂಬಂಧಿಸಿಲ್ಲ ಎಂಬ ಭರವಸೆಯನ್ನು ನಾವು ಕೆಎಫ್‌ಸಿಸಿಗೆ ನೀಡಿದ್ದೆವು. ಸಿನಿಮಾವನ್ನು ಅದೇ ರೀತಿಯಲ್ಲಿ ಮಾಡಿದ್ದೇವೆ. ಚಿತ್ರದ ಚಿತ್ರೀಕರಣಕ್ಕೆ ಶೀರ್ಷಿಕೆಯನ್ನು ನೋಂದಾಯಿಸಲು ಕೆಎಫ್‌ಸಿಸಿಯಿಂದ ಅನುಮತಿ ಪಡೆಯುವಾಗ ಪ್ರತಿಯೊಬ್ಬ ನಿರ್ಮಾಪಕರು ಅನುಸರಿಸಬೇಕಾದ ಎಲ್ಲ ಕಾರ್ಯವಿಧಾನಗಳನ್ನು ನಾವು ಅನುಸರಿಸಿದ್ದೇವೆ. ಚಿತ್ರೀಕರಣದ ಸಮಯದಲ್ಲಿ ತನ್ನದೇ ಅಂಗಸಂಸ್ಥೆಗಳ ಸದಸ್ಯರನ್ನು ಎಲ್ಲಿ, ಎಷ್ಟು ಬಳಸಿಕೊಳ್ಳಬೇಕು, ಯಾವೆಲ್ಲ ನಿಯಮಗಳನ್ನು ಅನುಸರಿಸಬೇಕು ಎಂದೆಲ್ಲ ಹೇಳುತ್ತದೆ. ಅದನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಅವುಗಳ ಬೆನ್ನಿಗೆ ನಿಲ್ಲುತ್ತದೆ. ಆದರೆ, ಕೋಟಿ ಕೋಟಿ ಹಣ ಹಾಕಿ ಸಿನಿಮಾ ಮಾಡುವ ಚಿತ್ರತಂಡವನ್ನು ರಕ್ಷಿಸಲು ಸಾಧ್ಯವಾಗದಂತಹ ಶೀರ್ಷಿಕೆಗಳನ್ನು ನೀಡುತ್ತದೆ? ಈ ಸೋಜಿಗವನ್ನು ಹೊರತುಪಡಿಸಿ, ಗೋದ್ರಾ ಶೀರ್ಷಿಕೆಯನ್ನು ಬಳಸಿಕೊಂಡು ನಾವು ಈಗಾಗಲೇ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದೇವೆ ಮತ್ತು ಕಳೆದ ಎರಡು ವರ್ಷಗಳಿಂದ ಈ ಹೆಸರಿನಿಂದಲೇ ಸಿನಿಮಾ ಪ್ರಚಾರ ಮಾಡಿದ್ದೇವೆ. ಅದಕ್ಕಾಗಿ ಹಣವನ್ನೂ ವ್ಯಯಿಸಿದ್ದೇವೆ. ಈಗಾಗಲೇ ನಾವು ನಮ್ಮ ಸಿನಿಮಾದ ಹೆಸರನ್ನು ಬದಲಾಯಿಸುವುದಾಗಿ ಸಿಬಿಎಫ್‌ಸಿಗೆ ಭರವಸೆ ನೀಡಿದ್ದೇವೆ.’

‘ಹೆಸರನ್ನು ಬದಲಾಯಿಸುವ ಮೂಲಕ ನಾವು ಈಗ ಅನುಭವಿಸಬೇಕಾದ ಎಲ್ಲ ನಷ್ಟಗಳನ್ನು ಯಾರು ಸರಿದೂಗಿಸಲಿದ್ದಾರೆ? ಕಳೆದ ಎರಡು ವರ್ಷಗಳಲ್ಲಿ ನಾವು ಕೈಗೊಂಡ ಎಲ್ಲ ಪ್ರಚಾರದ ಗತಿ? ಕೆಎಫ್‌ಸಿಸಿಯು ಈ ವಿಷಯದಲ್ಲಿ ನಮಗೆ ಧೈರ್ಯ ತುಂಬಬೇಕಿದೆ. ಆಗಿರುವ ಈ ಗೊಂದಲ ತಿಳಿಗೊಳಿಸಬೇಕಿದೆ. ಜವಾಬ್ದಾರಿಯುತ ಚಲನಚಿತ್ರ ನಿರ್ಮಾಪಕರಾಗಿ, ನಾವು ಉತ್ತರಗಳನ್ನು ಕೋರುತ್ತೇವೆ. ನಿರ್ಮಾಪಕರು ಮತ್ತು ನಿರ್ದೇಶಕರು ಹಾಗೂ ನೂರಾರು ಕಲಾವಿದರು ಮತ್ತು ತಂತ್ರಜ್ಞರನ್ನು ಕೆಎಫ್‌ಸಿಸಿಯು ಒಳಗೊಳ್ಳುವುದರಿಂದ, ನೀವು ಕೊಟ್ಟ ಶೀರ್ಷಿಕೆಗಳನ್ನೇ ನಂಬಿಕೊಂಡು ಶ್ರಮ ಪಡುವುದರಿಂದ, ಕೊನೆಗೆ ನೀವು ಕೊಡುವ ಶೀರ್ಷಿಕೆಗೆ ಯಾವುದೇ ಬೆಲೆ ಇಲ್ಲ ಅಂದಾಗ ನಾವು ಯಾರನ್ನು ನಂಬಬೇಕು?’

‘ನಾವು ಸಿಬಿಎಫ್‌ಸಿಗೆ ಬದ್ಧರಾಗಿದ್ದೇವೆ ಮತ್ತು ಚಿತ್ರದ ಶೀರ್ಷಿಕೆಯನ್ನು ಬದಲಾಯಿಸುತ್ತೇವೆ. ಈ ಚಿತ್ರದಲ್ಲಿ ಅಚ್ಯುತ್ ಕುಮಾರ್, ವಸಿಷ್ಠ ಸಿಂಹ, ರಕ್ಷ ಸೋಮಶೇಖರ್ ಮತ್ತು ಸೋನು ಗೌಡ ಮುಂತಾದವರ ನಟಿದ್ದಾರೆ. ಜುಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ, ಕೆ.ಪಿ. ಹಿನ್ನೆಲೆ ಸಂಗೀತ ಕೊಟ್ಟಿದ್ದಾರೆ. ಕೆ.ಎಸ್. ನಂದೀಶ್ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ಧತೆ ಕೂಡ ನಡೆಸಲಾಗಿದೆ.’

* ವಂದನೆಗಳೊಂದಿಗೆ (ಗೋದ್ರಾ) ಚಿತ್ರತಂಡ

This Article Has 1 Comment
  1. Pingback: Buy Sex Toys Online

Leave a Reply

Your email address will not be published. Required fields are marked *

Translate »
error: Content is protected !!