”ಆತ್ಮನಿರ್ಭರತ ಭಾರತ” ವಿಶ್ವಕ್ಕೆ ಗುರುವಾಗಲಿ … ವಿಡಿಯೋ ಸಾಂಗ್ ಬಿಡುಗಡೆ .

ಕಳೆದ ಕೆಲವು ತಿಂಗಳಿನಿಂದ ಕೊರೋನ ವೈರಾಣು ಕೊಟ್ಟ ಕಷ್ಟ ಅಷ್ಟಿಷ್ಟಲ್ಲ. ಇದರಿಂದಾಗಿ ಆರ್ಥಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಿ, ಸಾರ್ವಜನಿಕರ ಜನಜೀವನ ಬದುಕಿನ ಶೈಲಿಯನ್ನು ಬದಲಿಸಿರುವುದು ತಮಗೆ ತಿಳಿದ ಸಂಗತಿ.
ಇಂತಹ ಪರಿಸ್ಥಿತಿಯಲ್ಲಿ ಕನ್ನಡಿಗರಿಗೆ ಕೊರೋನ ವಿರುದ್ದ ಹೋರಡಲು, ಆತ್ಮಸ್ಥೈರ್ಯ ತುಂಬುವ ಸಲುವಾಗಿ  ಆತ್ಮನಿರ್ಭರತ ಭಾರತ” ವಿಶ್ವಕ್ಕೆ ಗುರುವಾಗಲಿ … ವಿಡಿಯೋ ಸಾಂಗ್ ನಿರ್ಮಿಸಲಾಗಿದೆ..

ಈ ವಿಡಿಯೋ ಸಾಂಗ್ ನಲ್ಲಿ ನಮ್ಮ ಪರಂಪರೆ, ನಮ್ಮ ಶಕ್ತಿ ಹಾಗೂ ನಮ್ಮ ಸಾಧನೆ ಏನು .. ಎಂಬ ವಿಷಯ ತಿಳಿಸಿ, ಎಷ್ಟೋ ಕಷ್ಟಗಳನ್ನು ಎದುರಿಸಿರುವ ನಾವು ಕೊರೋನ ವಿರುದ್ಧ ಹೋರಡಲಾರೆವಾ? ಎಂದು ಎಲ್ಲರಿಗೂ ಧೈರ್ಯ ತುಂಬುವ ಗೀತೆಯಾಗಿ ಈ ಹಾಡು ಮೂಡಿಬಂದಿದೆ.ಮಾರುತಿ ಮೆಡಿಕಲ್ಸ್ ನ ಮಹೇಂದ್ರ ಮುಣೋತ್ ಆನಂದ್ ಸಿನಿಮಾಸ್ ಮೂಲಕ‌‌ ಈ ವಿಡಿಯೋ ಸಾಂಗ್ ನಿರ್ಮಿಸಿದ್ದಾರೆ. ಈ ಹಿಂದೆ ” ನಮಗಾಗಿ ಜೀವ ಕೊಟ್ಟವರು” ಎಂಬ ವಿಡಿಯೋ ಸಾಂಗ್ ಸಹ ಬಿಡುಗಡೆ ಮಾಡಿದ್ದರು.  ಎಂ.ಗಜೇಂದ್ರ ”ಆತ್ಮನಿರ್ಭರತ ಭಾರತ” ವಿಶ್ವಕ್ಕೆ ಗುರುವಾಗಲಿ … ವಿಡಿಯೋ ಸಾಂಗ್ ನಿರ್ದೇಶನ ಮಾಡಿದ್ದಾರೆ. ವಿಜಯ್ ಕೃಷ್ಣ ಸಂಗೀತ ನೀಡಿರುವ ಈ ಹಾಡನ್ನು ರಾಜ್ಯ ಪ್ರಶಸ್ತಿ ವಿಜೇತ ಗಾಯಕ ತೇಜಸ್ವಿ ಹರಿದಾಸ್ ಹಾಡಿದ್ದಾರೆ. ಹಂಪಿ ಮಹೇಶ್
ಮೂರುರಾಯರಗಂಡ ಸಾಹಿತ್ಯ ಬರೆದಿರುವ ಈ ಹಾಡಿಗೆ ಲಕ್ಷ್ಮೀಕಾಂತ್ – ವೀರೇಶ್ ಛಾಯಾಗ್ರಹಣ‌ ಹಾಗೂ ಶ್ರೀ ಜವಳಿ ಅವರ ಸಂಕಲನವಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!