ಥ್ರಿಲ್ಲರ್ ಸಿನಿಮಾದಲ್ಲಿ ಅಜಯ್ ರಾವ್ ನಟನೆ

ನಟ ಅಜಯ್ ರಾವ್ ಅವರು ರಂಗಿತರಂಗ ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರೊಂದಿಗೆ ಥ್ರಿಲ್ಲರ್ ಸಿನಿಮಾ ಘೋಷಿಸಿದ್ದಾರೆ.

ಸಿನಿಮಾಗೆ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಎಂಬ ಶೀರ್ಷಿಕೆ ನೀಡಲಾಗಿದೆ. ಸಿನಿಮಾದಲ್ಲಿ ಹಾಸ್ಯದ ಅಂಶಗಳೂ ಇರಲಿವೆ.

ಸುನಿ ಅವರೊಂದಿಗೆ ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಅಭಿಷೇಕ್, ಈ ಸಿನಿಮಾ ಮೂಲಕ ಚೊಚ್ಚಲ ನಿರ್ದೇಶಕ ಆಗಿ ಭಡ್ತಿ ಪಡೆಯುತ್ತಿದ್ದಾರೆ. ಕುತೂಹಲಕಾರಿ ಪೋಸ್ಟರ್ ಮೂಲಕ ಈ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ.

ಸಿನಿಮಾದ ಕಥೆ ಬ್ಯಾಂಕ್ ದರೋಡೆ ಘಟನೆಯ ಸುತ್ತ ಹೆಣೆಯಲಾಗಿದೆ. 2023 ರ ಜನವರಿಯಿಂದ ಚಿತ್ರೀಕರಣ ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ.

ರಂಗಿತರಂಗ ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರ ಬ್ಯಾನರ್ ಶ್ರೀದೇವಿ ಎಂಟರ್ಟೈನರ್ಸ್ ಅಡಿಯಲ್ಲಿ ಮೂಡಿಬರುತ್ತಿರುವ 5 ನೇ ಸಿನಿಮಾ ಇದಾಗಿದೆ.

ಸಿನಿಮಾಗೆ ಜುದಾ ಸ್ಯಾಂಡಿ ಸಂಗೀತ, ಅಭಿಷೇಕ್ ಜಿ ಕಾಸರಗೋಡು ಅವರ ಸಿನಿಮಾಟೋಗ್ರಫಿ ಇದೆ. ತೇಜಸ್ ಆರ್ ಸಂಕಲನ, ಕಲಾ ವಿಭಾಗದ ಮುಖ್ಯಸ್ಥರಾಗಿ ರಘು ಇರಲಿದ್ದಾರೆ.
____

Be the first to comment

Leave a Reply

Your email address will not be published. Required fields are marked *

Translate »
error: Content is protected !!