ಸಂತ್ರಸ್ತೆಯ ನೆರವಿಗೆ ಬಂದ ಅಲ್ಲು ಅರ್ಜುನ್

ಡ್ಯಾನ್ಸ್ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅವರು 21 ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣದ  ಸಂತ್ರಸ್ತೆಯ ನೆರವಿಗೆ ಅಲ್ಲು ಅರ್ಜುನ್ ಅವರು ಬಂದಿದ್ದಾರೆ.

ಹೋಂ ಬ್ಯಾನರ್  ಗೀತಾ ಆರ್ಟ್ಸ್​ ಅಡಿ ನಿರ್ಮಾಣ ಆಗುವ ಪ್ರತೀ ಚಿತ್ರದಲ್ಲೂ  ಸಂತ್ರಸ್ತೆಗೆ ಅವಕಾಶ ನೀಡೋದಾಗಿ ಅಲ್ಲು ಅರ್ಜುನ್ ಶಪಥ ಮಾಡಿದ್ದಾರೆ. ಅವರ ನಡೆಗೆ  ಮೆಚ್ಚುಗೆ ಸಿಕ್ಕಿದೆ.

ಜಾನಿ ಮಾಸ್ಟರ್ ಹಾಗೂ ಅಲ್ಲು ಅರ್ಜುನ್ ಒಟ್ಟಾಗಿ ಕೆಲಸ ಮಾಡಿದ್ದಾರೆ. ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರದ ‘ಶ್ರೀವಲ್ಲಿ..’ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದು ಜಾನಿ ಮಾಸ್ಟರ್. ಜಾನಿ ಮಾಸ್ಟರ್ ಜೊತೆ ಸಹಾಯಕಿ ಆಗಿದ್ದ ಯುವತಿಯ ಮೇಲೆ ಅತ್ಯಾಚಾರ ನಡೆದಿದೆ. ಆ ಯುವತಿಯ ಪರಿಚಯ ಅಲ್ಲು ಅರ್ಜುನ್  ಗೂ ಇದೆ. ಈ ಕಾರಣದಿಂದ ಅಲ್ಲು ಅರ್ಜುನ್ ಅವರು ಯುವತಿಯ ಸಹಾಯಕ್ಕೆ ಮುಂದಾಗಿದ್ದಾರೆ.

ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.  ಈ ಸಂತ್ರಸ್ತೆ ‘ಪುಷ್ಪ 2’ ಚಿತ್ರದಲ್ಲಿ ಕೆಲಸ ಮಾಡಿದ್ದಾರೆ.

ಜಾನಿ ಮಾಸ್ಟರ್  ವಿರುದ್ಧ ಎಫ್‌ಐಆರ್  ದಾಖಲಾಗಿದೆ.  ನರ್ಸಿಂಗಿ ಪೊಲೀಸ್ ಠಾಣೆಯಲ್ಲಿ  ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!