ಅಮರ ಪ್ರೇಮಿ ಅರುಣ್

‘ಅಮರ ಪ್ರೇಮಿ ಅರುಣ್’ ಚಿತ್ರ ಈ ವಾರ ತೆರೆಗೆ

ಒಲವು ಸಿನಿಮಾ ಲಾಂಛನದಲ್ಲಿ ಒಲವಿನ ಗೆಳೆಯರು ಒಂದಿಷ್ಟು ಜನ ಸೇರಿ ಒಲವಿನಿಂದ ನಿರ್ಮಾಣ ಮಾಡಿರುವ ಹಾಗೂ ಪ್ರವೀಣ್ ಕುಮಾರ್ ಜಿ ಬರವಣಿಗೆ ಹಾಗೂ ನಿರ್ದೇಶನದ ‘ಅಮರ ಪ್ರೇಮಿ ಅರುಣ್’ ಚಿತ್ರ ಈ ವಾರ(ಏಪ್ರಿಲ್ 25) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಬಳ್ಳಾರಿ ಭಾಗದ ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಹರಿಶರ್ವ ಅಭಿನಯಿಸಿದ್ದಾರೆ. ನಾಯಕಿಯಾಗಿ ದೀಪಿಕಾ ಆರಾಧ್ಯ ಇದ್ದಾರೆ. ಧರ್ಮಣ್ಣ ಕಡೂರು, ಕ್ರಿತಿ ಭಟ್, ಮಹೇಶ್ ಬಂಗ್, ಅರ್ಚನಾ ಕೊಟ್ಟಿಗೆ, ರಂಜಿತಾ ಪುಟ್ಟಸ್ವಾಮಿ, ಮಂಜಮ್ಮ ಜೋಗತಿ, ರಾಧ ರಾಮಚಂದ್ರ, ಬಲ‌ ರಾಜವಾಡಿ ಹೀಗೆ ಅನುಭವಿ ಕಲಾವಿದರ ದೊಡ್ಡ ದಂಡೆ ಈ ಚಿತ್ರದಲ್ಲಿದೆ. ಬಳ್ಳಾರಿ ಆಸುಪಾಸಿನಲ್ಲೇ ಚಿತ್ರೀಕರಣ ನಡೆದಿರುವ ಈ ಚಿತ್ರದ ಸಂಭಾಷಣೆ ಕೂಡ ಅಲ್ಲಿನ ಸೊಗಡಿನಲ್ಲೇ ಇರುತ್ತದೆ.

ಅಮರ ಪ್ರೇಮಿ ಅರುಣ್

ಯೋಗರಾಜ್ ಭಟ್, ಜಯಂತ ಕಾಯ್ಕಿಣಿ ಹಾಗೂ ಪ್ರವೀಣ್ ಕುಮಾರ್ ಅವರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಕಿರಣ್ ರವೀಂದ್ರನಾಥ್ ಸಂಗೀತ ನೀಡಿದ್ದಾರೆ. ಡಿ ಬಿಟ್ಸ್ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಈಗಾಗಲೇ ಜನಪ್ರಿಯವಾಗಿದೆ. ಪ್ರವೀಣ್ ಎಸ್ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಮಂಡ್ಯ ಮಂಜು ಕಾರ್ಯ ನಿರ್ವಹಿಸಿದ್ದಾರೆ.

ಅಮರ ಪ್ರೇಮಿ ಅರುಣ್

Be the first to comment

Leave a Reply

Your email address will not be published. Required fields are marked *

Translate »
error: Content is protected !!