ಅಮ್ಜಾದ್ ಖಾನ್ ಬಂಧಿಸಿದ ಪೊಲೀಸರು

ಆಕಾಶ ದೀಪ ಧಾರವಾಹಿಯ ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜಾದ್ ಖಾನ್ ನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.

ಅಮ್ಜಾದ್ ಖಾನ್ ತನಗೆ ಸುಳ್ಳು ಹೇಳಿ ಮದುವೆ ಆಗಿದ್ದಾನೆ. ತನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಲವ್ ಜಿಹಾದ್ ಆರೋಪವನ್ನು ಪತಿಯ ಮೇಲೆ ಹೊರಿಸಿ ದಿವ್ಯಾ ಪೊಲೀಸರಿಗೆ ದೂರು ನೀಡಿದ್ದರು.

ತಮಿಳು ಧಾರವಾಹಿ ಶೂಟಿಂಗ್ ಸಂದರ್ಭದಲ್ಲಿ ಪರಿಚಯವಾಗಿದ್ದ ದಿವ್ಯಾ ಹಾಗೂ ಅಮ್ಜಾದ್ ಬಳಿಕ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಜೂನ್ ತಿಂಗಳಲ್ಲಿ ಮದುವೆಯಾಗಿದ್ದು ದಿವ್ಯಾ ಮೂರು ತಿಂಗಳ ಗರ್ಭಿಣಿ. ಮದುವೆಯ ವಿಚಾರವನ್ನು ದಿವ್ಯಾ ಸ್ನೇಹಿತರ ಬಳಿ ಹೇಳಿಕೊಂಡ ಕಾರಣಕ್ಕೆ ಅಮ್ಜಾದ್ ಖಾನ್ ಹಲ್ಲೆ ಮಾಡಿದ್ದಾನೆ ಎಂದು ದಿವ್ಯಾ ಆರೋಪ ಮಾಡಿದ್ದರು.

ಹಲ್ಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ದಿವ್ಯಾ ಶ್ರೀಧರ್ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆದ ಬಳಿಕ ಅಮ್ಜಾದ್ ಖಾನ್ ಮನೆಗೆ ತೆರಳಿದ್ದರು. ಈ ವೇಳೆ ದಿವ್ಯಾ ಶ್ರೀಧರ್, ತನಗೆ ಈ ರೀತಿ ಯಾಕೆ ಮೋಸ ಮಾಡಿದೆ ಎಂದು ಪ್ರಶ್ನಿಸಿದ್ದರು. ದಿವ್ಯಾ ಶ್ರೀಧರ್ ಕೂಗಾಡುತ್ತಿರುವ ವಿಡಿಯೋವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ಅಮ್ಜಾದ್ ಖಾನ್ ಅದನ್ನು ಮಾಧ್ಯಮಗಳಿಗೆ ನೀಡಿದ್ದರು.

ದಿವ್ಯಾ ಶ್ರೀಧರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಹಿಳಾ ಆಯೋಗ ಮಧ್ಯಪ್ರವೇಶ ಮಾಡಿತ್ತು. ದಿವ್ಯಾ ಶ್ರೀಧರ್ ಗೆ ಸೂಕ್ತ ನ್ಯಾಯ ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಈ ಕುರಿತಂತೆ ತಮಿಳು ನಾಡು ಮಹಿಳಾ ಆಯೋಗದ ಜೊತೆ ದೂರವಾಣಿ ಮೂಲಕವೂ ಮಾತನಾಡಿದ್ದರು.

_____

Be the first to comment

Leave a Reply

Your email address will not be published. Required fields are marked *

Translate »
error: Content is protected !!