‘ಅಮೄತ ಅಪಾರ್ಟ್ಮಮೆಂಟ್ಸ್’ ತಂಡದಿಂದ, ಪ್ರೇಮಗೀತೆ ಬಿಡುಗಡೆ

“ಅಮೄತ ಅಪಾರ್ಟ್ಮಮೆಂಟ್ಸ್”  ತಂಡದಿಂದ, “ಶುರುವಾಗಬೇಕು ಮತ್ತೊಮ್ಮೆ ನಮ್ಮ ಒಲವು” ಎಂಬ ಪ್ರೇಮಗೀತೆಯನ್ನು  ಯುಟ್ಯೂಬ್ ಛಾನಲ್ ಮುಖಾಂತರ ಬಿಡುಗಡೆ ಮಾಡಿದೆ.
ಗಂಡ-ಹೆಂಡತಿಯ ಮಧ್ಯದ ಮುನಿಸು ಕರಗುವ ಸನ್ನಿವೇಶಕ್ಕೆ ತಕ್ಕಂತೆ, ಇಡೀ ಸಿನೆಮಾದ ಕಥೆಯ ಸಾರಾಂಶವನ್ನು ಹೇಳುವಂತಹ, ಪ್ರೇಕ್ಷನ ಮನ ತಟ್ಟುವಂತಹ ಒಂದು ವಿಶೇಷ ಹಾಡಿನ ಅವಶ್ಯಕತೆ ಇತ್ತು.
ಈ ಥರದ ಒಂದು ವಿನೂತನ ಪ್ರೇಮಗೀತೆಗೆ, ಹೂ-ಹೃದಯದ ಪ್ರೇಮಕವಿ ಕೆ.ಕಲ್ಯಾಣರವರೇ ಸೂಕ್ತ ಎಂದು ನಾನು ಅವರ ಬಳಿ ಹೋದೆ ಎಂದು ಚಿತ್ರದ ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ) ಚಿತ್ರಗೀತೆಯ ಹಿಂದಿನ ಕಥೆಯನ್ನು ಬಿಚ್ಚಿಟ್ಟರು.
ಯುವಪ್ರೇಮಿಗಳ ಪ್ರೀತಿ-ಪ್ರೇಮ-ಮುನಿಸು-ತಲ್ಲಣಗಳ ಭಾವಕ್ಕೆ ತಕ್ಕಂತೆ ಗೀತೆಯ ಸಾಲುಗಳನ್ನು ಕೆ.ಕಲ್ಯಾಣ ಬರೆದಿದ್ದಾರೆ. ಅದಕ್ಕೆ ಪೂರಕವಾಗಿ ಸಂಗೀತ ನಿರ್ದೇಶಕ ಎಸ್.ಡಿ.ಅರವಿಂದ ಕೇಳುಗರನ್ನು ಮೋಡಿ ಮಾಡುವಂತಹ ಸಂಗೀತ ನೀಡಿದ್ದಾರೆ.
ಈ ಯುಗಳ ಹಾಡಿಗೆ ವಾಣಿ ಹರಿಕೃಷ್ಣ ಮತ್ತು ಅಜಯ ವಾರಿಯರ್ ಧ್ವನಿ ನೀಡಿದ್ದಾರೆ. ಬಹಳ ದಿನಗಳ ನಂತರ ಈ ಥರದ ಶುಧ್ಧ ಸಾಹಿತ್ಯಕ್ಕೆ ಧ್ವನಿಯಾಗಿರುವದಕ್ಕೆ ಇಬ್ಬರೂ ಸಂತೋಷ ವ್ಯಕ್ತಪಡಿಸಿದ್ದಾರೆ.

https://youtu.be/hYp7konaOC0

Be the first to comment

Leave a Reply

Your email address will not be published. Required fields are marked *

Translate »
error: Content is protected !!