ಅನೂಪ್ ಭಂಡಾರಿಗೆ ಭರ್ಜರಿ ಆಫರ್

ಸುದೀಪ್ ಅಭಿನಯದ “ವಿಕ್ರಾಂತ್ ರೋಣ” ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಬಾಲಿವುಡ್ ಮತ್ತು ದಕ್ಷಿಣ ಭಾರತದ ಸಿನಿಮಾ ನಿರ್ಮಾಪಕರಿಂದ ಭರ್ಜರಿ ಆಫರ್ ಪಡೆಯುತ್ತಿದ್ದಾರೆ.

“ವಿಕ್ರಾಂತ್ ರೋಣ” ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಅವರ ಮೇಲೆ ನಿರ್ಮಾಪಕರು ಕಣ್ಣು ನೆಟ್ಟಿದ್ದು, ಅವರನ್ನು ಹೊಸ ಚಿತ್ರಕ್ಕಾಗಿ ಸಂಪರ್ಕಿಸುತ್ತಿದ್ದಾರೆ.

ಪ್ರಸಿದ್ದ ನಿರ್ಮಾಣ ಸಂಸ್ಥೆ ಎರೋಸ್ ಇಂಟರ್ ನ್ಯಾಷನಲ್ ಪ್ರೊಡಕ್ಷನ್ ಹೌಸ್ ಅನೂಪ್ ಭಂಡಾರಿ ಅವರನ್ನು ಸಂಪರ್ಕಿಸಿದೆ. ಅನ್ನಪೂರ್ಣ ಸ್ಟುಡಿಯೋಸ್ ಕೂಡ ತಮ್ಮ ಬ್ಯಾನರ್ ನಲ್ಲಿ ಕೆಲಸ ಮಾಡುವಂತೆ ಆಫರ್ ನೀಡಿದೆ ಎಂದು ತಿಳಿದು ಬಂದಿದೆ. ಇದರ ಜೊತೆಗೆ ಹಿಂದಿ ಸಿನಿಮಾ ನಿರ್ಮಾಪಕರು ಕೂಡ ಅನೂಪ್ ಭಂಡಾರಿ ಅವರನ್ನು ಸಂಪರ್ಕಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಅನೂಪ್ ಭಂಡಾರಿ ಪ್ರತಿಕ್ರಿಯಿಸಿದ್ದು, ಸದ್ಯ ನನ್ನ ಗಮನ ವಿಕ್ರಾಂತ್ ರೋಣ ಸಿನಿಮಾದ ಮೇಲಿದೆ. ವಿಕ್ರಾಂತ್ ರೋಣ ಬಿಡುಗಡೆ ನಂತರ ಮುಂದಿನ ಪ್ರಾಜೆಕ್ಟ್ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನೂ ವಿಕ್ರಾಂತ್ ರೋಣ ಸಿನಿಮಾಗಾಗಿ ಒಟಿಟಿ ಭಾರೀ ಆಫರ್ ನೀಡಿದ್ದರೂ ನಿರ್ಮಾಪಕರು ಥಿಯೇಟರ್ ನಲ್ಲಿ ಚಿತ್ರವನ್ನು ರಿಲೀಸ್ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ವಿಕ್ರಾಂತ್ ರೋಣ 55 ದೇಶಗಳಲ್ಲಿ 14 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಸುದೀಪ್ ಜೊತೆಗೆ ನಿರೂಪ್ ಭಂಡಾರಿ, ನೀತಾ ಅಶೋಕ್ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ವಿಕ್ರಾಂತ್ ರೋಣ ಫ್ಯಾಂಟಸಿ ಸಿನಿಮಾವನ್ನು ಫೆಬ್ರವರಿ 24 ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲು ಸಿದ್ಧತೆ ನಡೆಸಲಾಗಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!