ಮಾರುಕಟ್ಟೆಗೆ ಬಂತು ಅಪ್ಪು ರಾಖಿ

ರಕ್ಷಾ ಬಂಧನದ ಅಂಗವಾಗಿ ಪುನೀತ್ ರಾಜ್​ಕುಮಾರ್​ ಫೋಟೋ ಇರುವ ರಾಖಿಗಳು ಮಾರುಕಟ್ಟೆಗೆ ಬಂದಿದ್ದು ಗ್ರಾಹಕರನ್ನು ಆಕರ್ಷಿಸುತ್ತಿವೆ.

ಆಗಸ್ಟ್​ 11ರಂದು ಅಂದರೆ ನಾಳೆ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದ್ದು, ಬಗೆಬಗೆಯ ರಾಖಿಗಳು ಮಾರುಕಟ್ಟೆಯಲ್ಲಿವೆ. ರಕ್ಷಾ ಬಂಧನದ ಪ್ರಯುಕ್ತ ಮಾರುಕಟ್ಟೆಯಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಫೋಟೋ ಇರುವ ಅಪ್ಪು ರಾಖಿ ಬಂದಿದ್ದು, ಜನ ಇಷ್ಟಪಟ್ಟು ಖರೀದಿಸುತ್ತಿದ್ದಾರೆ.

ಪ್ರತಿ ವಿಶೇಷ ಸಂದರ್ಭದಲ್ಲೂ, ಹಬ್ಬ-ಹರಿದಿನಗಳಲ್ಲೂ ಪುನೀತ್‌ ಅವರ ಸ್ಮರಣೆ ಇದ್ದೇಇರುತ್ತದೆ. ಈಗ ಅಪ್ಪು ರಾಖಿಗಳು ಗಮನ ಸೆಳೆಯುತ್ತಿವೆ.

ಕೊಪ್ಪಳ ಸೇರಿದಂತೆ ಕರ್ನಾಟಕದ ಹಲವು ಕಡೆಗಳಲ್ಲಿಅಪ್ಪು ಅವರ​ ಫೋಟೋ ಇರುವ ರಾಖಿಗಳನ್ನು ತಯಾರಿಸಲಾಗಿದ್ದು, ಈ ಮೂಲಕ ರಕ್ಷಾ ಬಂಧನಕ್ಕೆ ವಿಶೇಷ ಕಳೆ ಬಂದಿದೆ.

ಪುನೀತ್‌ ಅವರ ಮಾದರಿ ಕೆಲಸಗಳನ್ನು ಪರಿಗಣಿಸಿ, ರಾಜ್ಯ ಸರ್ಕಾರ ಮರಣೋತ್ತರವಾಗಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ನವೆಂಬರ್​ 1ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಪುನೀತ್ ನಟಿಸಿರುವ ‘ಗಂಧದ ಗುಡಿ’ ಸಾಕ್ಷ್ಯಚಿತ್ರದಲ್ಲಿ ಕರುನಾಡಿನ ಅರಣ್ಯ ಮತ್ತು ವನ್ಯ ಜೀವಿಗಳ ಬಗ್ಗೆ ಬಿಚ್ಚಿಡಲಾಗಿದೆ. ಈ ಡಾಕ್ಯುಮೆಂಟರಿ ಮೂವಿ ಅಕ್ಟೋಬರ್​ 28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!