ಬಿ. ಸಿ. ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು

ಹಿರಿಯ ನಟ ಹಾಗೂ ಮಾಜಿ ಶಾಸಕ ಬಿ. ಸಿ. ಪಾಟೀಲ್ ಅವರ ಅಳಿಯ, ಮೊದಲ ಪುತ್ರಿ ಸೌಮ್ಯಾ ಪತಿ ಕೆಜಿ ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಿ.ಸಿ.ಪಾಟೀಲ್ ಅಳಿಯ ಕೆ.ಜಿ.ಪ್ರತಾಪ್ ಕುಮಾರ್ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರಾ ಬಳಿಯ ಅರಣ್ಯ ಪ್ರದೇಶದಲ್ಲಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದರು. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾದರೂ ಚಿಕಿತ್ಸೆ ಫಲಿಸಿದೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 41 ವರ್ಷ ವಯಸ್ಸಾಗಿತ್ತು.ಪ್ರತಾಪ್ ಕುಮಾರ್ ಅವರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ ಬಳಿಕ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೆ.ಜಿ.ಪ್ರತಾಪ್ ಕುಮಾರ್ ದಾವಣಗೆರೆಯ ಕತ್ತಲಗೇರಿ ಗ್ರಾಮದ ನಿವಾಸಿಯಾಗಿದ್ದರು. ಪ್ರತಾಪ್ ಕುಮಾರ್ ಬಿ.ಸಿ ಪಾಟೀಲ್ ಪತ್ನಿ ವನಜಾ ಅವರ ಸಹೋದರ. ಕಳೆದ 12 ವರ್ಷಗಳ ಹಿಂದೆ ಬಿ. ಸಿ. ಪಾಟೀಲ್ ಮೊದಲ ಪುತ್ರಿ ಸೌಮ್ಯಾ ಅವರನ್ನು ವಿವಾಹವಾಗಿದ್ದರು. ಸೌಮ್ಯ ಅವರನ್ನು ಮದುವೆಯಾದ ಬಳಿಕ ಪ್ರತಾಪ್ , ಬಿ.ಸಿ.ಪಾಟೀಲ್ ಅವರ ಮನೆಯ ಅಳಿಯನಾಗಿ, ಕೃಷಿಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದರು. ಬಿ. ಸಿ. ಪಾಟೀಲ್ ಅವರ ರಾಜಕೀಯ ಕೆಲಸಗಳನ್ನು ಸಹ ನೋಡಿಕೊಳ್ಳುತ್ತಿದ್ದರು.

ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!