Brinda acharya: ಎಸ್ ನಾರಾಯಣ್ ಜತೆಗೂಡಿದ ಬೃಂದಾ ಆಚಾರ್ಯ

ಪ್ರೇಮಂ ಪೂಜ್ಯಂ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಬೃಂದಾ ಆಚಾರ್ಯ ಅವರು ಹಿರಿಯ ನಿರ್ದೇಶಕ ಎಸ್ ನಾರಾಯಣ್ ಅವರ ‘ಒಂದ್ಸಲ ಮೀಟ್ ಮಾಡೋಣ’ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆಯಾಗಿದ್ದಾರೆ.

ಎಸ್ ನಾರಾಯಣ್ ಜೊತೆಗೆ ಕೆಲಸ ಮಾಡುವ ಬಗ್ಗೆ ಬೃಂದಾ ಆಚಾರ್ಯ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಇದರಿಂದ ನಟನೆಯಲ್ಲಿ ಮತ್ತಷ್ಟು ಪಕ್ವವಾಗಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಚಿತ್ರದಲ್ಲಿ ನನ್ನ ಪಾತ್ರಕ್ಕೆ ಒಳ್ಳೆಯ ಸ್ಕೋಪ್ ಇದೆ. ಇದು ಹೊಸತನ ಹಾಗೂ ವಿಭಿನ್ನವಾಗಿರುವ ಪಾತ್ರ. ಚಿತ್ರದ ಕಥೆ ಹಾಗೂ ಪಾತ್ರ ಕೇಳಿ ನಾನು ಎಕ್ಸೈಟ್ ಆಗಿದ್ದೇನೆ. ನನ್ನ ಭಾಗದ ಚಿತ್ರೀಕರಣ ಇನ್ನಷ್ಟೇ ಆರಂಭವಾಗಬೇಕಿದೆ ಎಂದು ಅವರು ಹೇಳಿದ್ದಾರೆ.

ಶ್ರೇಯಸ್ ಮಂಜು ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ಆರಂಭಗೊಂಡಿದೆ. ಕೆ ಮಂಜು ಹಾಗೂ ರಮೇಶ್ ಯಾದವ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಇದೊಂದು ಟ್ರಾವೆಲಿಂಗ್ ಲವ್ ಸ್ಟೋರಿ ಆಗಿದೆ. ಚಿತ್ರವನ್ನು ಸಕಲೇಶಪುರ, ವಿರಾಜಪೇಟೆ, ಕಣ್ಣೂರು, ಮೈಸೂರು, ಬೆಂಗಳೂರು, ಬೆಳಗಾವಿ, ಗೋವಾ ಮೊದಲಾದ ಕಡೆ ಶೂಟಿಂಗ್ ಮಾಡಲು ನಿರ್ಧರಿಸಲಾಗಿದೆ.

ಚಿತ್ರದಲ್ಲಿ ತಾರಾ ಅನುರಾಧ, ಶರತ್ ಲೋಹಿತಾಶ್ವ, ಸಾಧು ಕೋಕಿಲ, ಪ್ರಮೋದ್ ಶೆಟ್ಟಿ, ರಂಗಾಯಣ ರಘು ಇತರರು ನಟಿಸುತ್ತಿದ್ದಾರೆ.

ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ, ಗೀತ ರಚನೆಯನ್ನು ಎಸ್ ನಾರಾಯಣ್ ಮಾಡಿದ್ದಾರೆ. ಜೆಸ್ಸಿ ಗಿಫ್ಟ್ ಸಂಗೀತ, ಕುಮಾರ್ ಗೌಡ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ ಇದೆ.
_

Be the first to comment

Leave a Reply

Your email address will not be published. Required fields are marked *

Translate »
error: Content is protected !!