kranthi ರಚಿತಾ ರಾಮ್ ವಿರುದ್ಧ ಕೇಸ್

ಗಣರಾಜ್ಯೋತ್ಸವ ಮರೆತು ‘ಕ್ರಾಂತಿ’ ಉತ್ಸವ ಮಾಡಿ ಎಂದಿದ್ದ ರಚಿತಾ ರಾಮ್ ವಿರುದ್ಧ ಕೇಸ್ ದಾಖಲಾಗಿದೆ.

ಕ್ರಾಂತಿ ಚಿತ್ರದ ಪ್ರಚಾರ ಮಾಡುವ ವೇಳೆ ನಟಿ ರಚಿತಾ ರಾಮ್ ಇಷ್ಟು ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಮಾಡ್ತಾ ಇದ್ವಿ, ಆದರೆ ಈ ವರ್ಷ ಕ್ರಾಂತಿ ಉತ್ಸವ ಮಾತ್ರ ಎಂದು ನೀಡಿದ್ದ ಹೇಳಿಕೆ ದೇಶಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈಗ ಮಂಡ್ಯ ಜಿಲ್ಲೆಯ ಮದ್ದೂರಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಲಿಂಗಯ್ಯ ಅವರು ದೂರು ದಾಖಲು ಮಾಡಿದ್ದಾರೆ. ರಚಿತಾ ರಾಮ್ ನೀಡಿರುವ ಹೇಳಿಕೆ ದೇಶದ್ರೋಹದ ಹೇಳಿಕೆಯಾಗಿದೆ. ಇದರ ವಿರುದ್ಧ ಕ್ರಮ ಕೈಗೊಂಡು ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಮಂಡ್ಯ ಜಿಲ್ಲೆಯ ಮದ್ದೂರಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದರ್ಶನ್ ಹಾಗೂ ರಚಿತಾ ರಾಮ್ ನಟನೆಯ ಕ್ರಾಂತಿ ಚಿತ್ರ ಇದೇ ಗಣರಾಜ್ಯೋತ್ಸವದ ದಿನದಂದು ಬಿಡುಗಡೆಯಾಗುತ್ತಿದೆ.ಚಿತ್ರದ ಟಿಕೆಟ್‌ಗಳನ್ನು ಖರೀದಿಸುವುದಕ್ಕಾಗಿ ಅಭಿಮಾನಿಗಳು ಕಾತರರಾಗಿ ಎದುರು ನೋಡುತ್ತಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!