ಚೈತ್ರಾ ಕುಂದಾಪುರ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ

ಬಿಗ್ ಬಾಸ್ ಸ್ಪರ್ಧಿ11ರ ಸ್ಪರ್ಧಿ ಚೈತ್ರಾ ಕುಂದಾಪುರ ಅವರು  ಪ್ರೀತಿಸಿದ ಹುಡುಗನೊಂದಿಗೆ  ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಚೈತ್ರಾ ಮತ್ತು ಶ್ರೀಕಾಂತ್ ಕಶ್ಯಪ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಸಮ್ಮತಿಯೊಂದಿಗೆ ಚೈತ್ರಾ ಕುಂದಾಪುರ ಸರಳ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.  ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ.

ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್, ಗೋಲ್ಡ್ ಸುರೇಶ್ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದ್ದಾರೆ.

ಕಾಲೇಜಿನಲ್ಲಿ ಓದುತ್ತಿದ್ದಾಗ ಚೈತ್ರಾಗೆ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು.  ಆ್ಯನಿಮೇಷನ್ ಕೋರ್ಸ್ ಮಾಡಿರುವ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು.   ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ.

ಇತ್ತೀಚೆಗೆ ‘ಮಜಾ ಟಾಕೀಸ್’ ಶೋಗೆ ಬಿಗ್ ಬಾಸ್ ಸ್ಪರ್ಧಿಗಳಾದ ಧರ್ಮ ಕೀರ್ತಿರಾಜ್, ಅನುಷಾ ರೈ ಹಾಗೂ ಚೈತ್ರಾ ಎಂಟ್ರಿ ಕೊಟ್ಟಿದ್ದರು. ಚೈತ್ರಾ ಕುಂದಾಪುರ ಅವರಿಗೆ ಮದುವೆ ಫಿಕ್ಸ್ ಆದ ವಿಚಾರವನ್ನು ಚೈತ್ರಾ ಕುಂದಾಪುರ ಅವರು ರಿವೀಲ್ ಮಾಡಿದ್ದರು.  ಸೃಜನ್ ಲವ್ ಅಥವಾ ಅರೇಂಜ್ಡ್ ಮ್ಯಾರೇಜಾ ಎಂಬ ಪ್ರಶ್ನಿಸಿದ್ದರು. ಚೈತ್ರಾ  ಕಾಲೇಜಿನಲ್ಲಿ ಲವ್ ಶುರುವಾಗಿದ್ದುಎಂದು ಉತ್ತರ ನೀಡಿದ್ದರು.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!