ವಿನಾಯಕನ ಸನ್ನಿಧಿಯಲ್ಲಿ “ಚಂದ್ರಲೇಖ ರಿಟರ್ನ್ಸ್” ಚಿತ್ರಕ್ಕೆ ‌ಚಾಲನೆ.

ನಿರ್ದೇಶಕ ಓಂಪ್ರಕಾಶ್ ರಾವ್ ಬಹಳವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ್ದಾರೆ. ಓಂಪ್ರಕಾಶ್ ರಾವ್ ನಿರ್ದೇಶನದ 49 ನೇ ಚಿತ್ರವಿದು. ಡಾರ್ಲಿಂಗ್ ಕೃಷ್ಣ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. “ಚಂದ್ರಲೇಖ ರಿಟರ್ನ್ಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಆನಂದರಾವ್ ಸರ್ಕಲ್ ನ‌ ಶ್ರೀವಿನಾಯಕ ದೇವಸ್ಥಾನದಲ್ಲಿ‌ ನೆರವೇರಿತು.

ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಶ್ರೀ ಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ಈ ಚಿತ್ರ ನಿರ್ಮಿಸುತ್ತಿದ್ದಾರೆ.
ಈ ಹಿಂದೆ ರವೀಶ್ ಅವರ ನಿರ್ಮಿಸಿರುವ “ಕಸ್ತೂರಿ ಮಹಲ್” ಚಿತ್ರ ಸಹ ತೆರೆಗೆ ಬರಲು ಸಿದ್ದವಾಗಿದೆ.

ಡಾರ್ಲಿಂಗ್ ಕೃಷ್ಣ ಅವರೊಂದಿಗೆ ಸಾಧುಕೋಕಿಲ, ನಾಗಶೇಖರ್, ವಿವಿನ್ ಸೂರ್ಯ, ಅಚ್ಯುತರಾವ್, ಸುಧಾ ಬೆಳವಾಡಿ, ಪ್ರಶಾಂತ್ ಸಿದ್ದಿ ಮುಂತಾದವರು ಈ‌ ಚಿತ್ರದ ತಾರಾಬಳಗದಲ್ಲಿದ್ದಾರೆ.

ದಕ್ಷಿಣ ಭಾರತದ ಖ್ಯಾತ ನಟಿಯೊಬ್ಬರು ಈ ಚಿತ್ರದಲ್ಲಿ ನಟಿಸಲಿದ್ದು, ಸದ್ಯದಲ್ಲೇ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ರವೀಶ್ ಆರ್ ಸಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!