ಪ್ರಜ್ವಲ್‌ ರೇವಣ್ಣಗೆ ಕಠಿಣ ಶಿಕ್ಷೆಯಾಗಲಿ ಎಂದ ಚೇತನ್

”ಹಾಸನದ ಎಂಪಿ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಆರೋಪ ಸಾಬೀತಾದರೆ  ಕಠಿಣ ಶಿಕ್ಷೆಯಾಗಲಿ” ಎಂದು ‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸಿದ್ದಾರೆ.

“ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳು ಗಂಭೀರವಾದದ್ದು. ತಪ್ಪು ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅನ್ಯಾಯಕ್ಕೊಳಗಾದ ಮಹಿಳೆಯರು ತಮ್ಮ ಕಷ್ಟಗಳನ್ನು ವಿವರಿಸಲು ಧೈರ್ಯದಿಂದ ಮುಂದೆ ಬರುತ್ತಿರುವುದನ್ನು ನೋಡಿ ಸಂತೋಷವಾಗಿದೆ” ಎಂದು ತಿಳಿಸಿದ್ದಾರೆ.

” ಪೆನ್​​​ ಡ್ರೈವ್​​ ಸಮಸ್ಯೆಯನ್ನು ಸಾವಿರಾರು ನಿರ್ಭಯಾಗಳಿಗೆ ಹೋಲಿಸಿ ಅದಕ್ಕೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಹೊಣೆ ಹೊರಬೇಕೆಂದು ಒತ್ತಾಯಿಸುತ್ತಿರುವ ಕಾಂಗ್ರೆಸ್ ಪಕ್ಷದ ಮಹಿಳೆಯರ ನಡೆ ಹಾಸ್ಯಾಸ್ಪದ” ಎಂದು ಚೇತನ್ ತಿಳಿಸಿದ್ದಾರೆ.

 “ಬೃಹತ್​ ಲೈಂಗಿಕ ಹಗರಣದಲ್ಲಿ 2,900 ಪೆನ್​​​ ಡ್ರೈವ್​​ ಚಿತ್ರಗಳು/ವಿಡಿಯೋಗಳನ್ನು ಕಾರ್ಯರೂಪಕ್ಕೆ ತರಲು ಆರೋಪಿ ಪ್ರಜ್ವಲ್​​​ ರೇವಣ್ಣ ನಡೆಸಿದ ಸಂಪೂರ್ಣ ನಿರ್ಭಯತೆಯು  ಮನಸ್ಸನ್ನು ದಿಗ್ಭ್ರಮೆಗೊಳಿಸಿದೆ. ಪೆನ್​ ಡ್ರೈವ್​ ಸಾರ್ವಜನಿಕಗೊಳಿಸಿದರೆ ಅವರ ಪಕ್ಷ, ಕುಟುಂಬ ಎದುರಿಸಬೇಕಾದ ಭೀಕರ ಪರಿಣಾಮಗಳ ಬಗ್ಗೆ ಯಾವುದೇ ಭಯವಿರಲಿಲ್ಲವೇ? ಆಳುವ ರಾಜವಂಶಗಳ ದ್ವೇಷಪೂರಿತ ಅಹಂಕಾರ ಆಶ್ಚರ್ಯಕರವಾಗಿದೆ” ಎಂದು  ಅಸಮಾಧಾನ ಹೊರ ಹಾಕಿದ್ದಾರೆ.

ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್‌ಐಟಿ, ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ.  ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ.

ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಜೆಡಿಎಸ್ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!