Chetan: ಸ್ಮಾರಕ ನಿರ್ಮಾಣಕ್ಕೆ ಸುಮಲತಾ ಕೈಚಾಚಿದ್ದಾರೆ: ಚೇತನ್

ಅಂಬರೀಶ್ ಯಾರ ಬಳಿಯೂ ಕೈಚಾಚಿರಲಿಲ್ಲ. ಆದರೆ ಸ್ಮಾರಕ ನಿರ್ಮಾಣಕ್ಕಾಗಿ ಸುಮಲತಾ ಸರ್ಕಾರದ ಬಳಿ ಕೈಚಾಚಿದ್ದಾರೆ ಎಂದು ನಟ ಚೇತನ್‌ ಹೇಳಿಕೆ ನೀಡಿದ್ದಾರೆ.

ಅಂಬರೀಶ್ ಸ್ಮಾರಕದ ಬಗ್ಗೆ ಹಾಗೂ ಸ್ಮಾರಕ ನಿರ್ಮಾಣಕ್ಕೆ ತಗುಲಿದ ವೆಚ್ಚದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಟ ಚೇತನ್ ಅಹಿಂಸಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅನಗತ್ಯವಾಗಿದ್ದ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಸುಮಲತಾ ಅವರು ಅಂದಾಜು ಎರಡು ಎಕರೆ ಜಾಗ ಮತ್ತು 12 ಕೋಟಿ ರೂಪಾಯಿ ಹಣವನ್ನು ಸರ್ಕಾರದಿಂದ ‘ಕೈ ಚಾಚಿ’ ಪಡೆದಿರುವುದು ವಿಪರ್ಯಾಸವೇ ಸರಿ ಎಂದಿದ್ದಾರೆ.

ಜನರ ತೆರಿಗೆ ಹಣವನ್ನು ಹೀಗೆ ದುರುಪಯೋಗಪಡಿಸಿಕೊಳ್ಳುವ ಬದಲು ಸುಮಲತಾರವರು ತಮ್ಮ ಸ್ವಂತದ 23.4 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲು ಸಾಧ್ಯವಾಗಲಿಲ್ಲವೇ? ಎಲ್ಲಾ ಉಳ್ಳವರಿಗೆ ಮತ್ತೆ ಸವಲತ್ತು ಒದಗಿಸುವುದು ನ್ಯಾಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಅಂಬರೀಶ್ ಅವರ ಸ್ಮಾರಕವನ್ನು ಸರ್ಕಾರವು ಕಂಠೀರವ ಸ್ಟುಡಿಯೋನಲ್ಲಿ ನಿರ್ಮಾಣ ಮಾಡಿದೆ. ಒಂದು ಎಕರೆ 34 ಗುಂಟೆ ಪ್ರದೇಶದಲ್ಲಿ ಭವ್ಯವಾಗಿ ಸ್ಮಾರಕ ನಿರ್ಮಾಣವಾಗಿದ್ದು ಇದಕ್ಕೆ ಸುಮಾರು 12 ಕೋಟಿಗೂ ಹೆಚ್ಚಿನ ಹಣ ಖರ್ಚಾಗಿದೆ. ಸ್ಮಾರಕವನ್ನು ಮಾರ್ಚ್ 27 ರಂದು ಸಿಎಂ ಬೊಮ್ಮಾಯಿ, ಸಚಿವ ಸುಧಾಕರ್, ಸಂಸದೆ ಸುಮಲತಾ ಅಂಬರೀಶ್ ಹಾಗೂ ಇತರರು ಉದ್ಘಾಟನೆ ಮಾಡಿದರು. ಅದೇ ದಿನ ಬೆಂಗಳೂರಿನ ರೇಸ್​ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರನ್ನು ಇಡಲಾಯಿತು.

ಅಂಬರೀಷ್ ಸ್ಮಾರಕ ಉದ್ಘಾಟನೆ ಸಮಾರಂಭದಲ್ಲಿ ಅಂಬಿ ನೆನೆದು ಸುಮಲತಾ ಭಾವುಕರಾಗಿ ಅಂಬರೀಷ್​ ಯಾರ ಬಳಿಯೂ ತಮ್ಮ ಜೀವಿತಾವಧಿಯಲ್ಲಿ ಯಾರ ಬಳಿಯೂ ಕೈಚಾಚಿಲ್ಲ ಎಂದಿದ್ದರು. ಆದರೆ ಸುಮಲತಾ ಅವರ ಮಾತನ್ನು ನಟ, ಹೋರಾಟಗಾರ ಚೇತನ್ ಅಹಿಂಸಾ ಕಟುವಾಗಿ ಟೀಕಿಸಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!