Chetan: ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಕ್ಕೆ ಚೇತನ್​ ವಿರೋಧ

ದಿ ಕೇರಳ ಸ್ಟೋರಿ’ ಚಿತ್ರದ ನಿಷೇಧದ ಒತ್ತಾಯ ಸರಿಯಲ್ಲ ಎಂದು ನಟ ಚೇತನ್‌ ಹೇಳಿದ್ದಾರೆ.

“ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ’ ಮೇ 5ರಂದು ತೆರೆಗೆ ಬರಲಿದೆ. ನಾನು ಈ ಹಿಂದೆ ಸಮುದಾಯದ, ಲಿಂಗದ ವಿರುದ್ಧ ದ್ವೇಷ ಮತ್ತು ಅವಹೇಳನ ಮಾಡುವ ಚಲನಚಿತ್ರಗಳಲ್ಲಿ ನಟಿಸಲು ನಿರಾಕರಿಸಿದ್ದೆ. ಆದರೆ, ಸೈದ್ಧಾಂತಿಕ ಆಧಾರದ ಮೇಲೆ ಸೆನ್ಸಾರ್​ ಮಂಡಳಿಯಿಂದ ಅನುಮತಿ ಪಡೆದ ಚಲನಚಿತ್ರವನ್ನು ರಾಜ್ಯವು ನಿಷೇಧಿಸಬೇಕು ಎಂದು ಹೇಳುವುದನ್ನು ನಾನು ಒಪ್ಪುವುದಿಲ್ಲ. ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯಗತ್ಯ” ಎಂದು ಚೇತನ್‌ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿದ್ದಾರೆ.

ವಿವಾದದ ನಡುವೆ, ಕಾಂಗ್ರೆಸ್ ಸಂಸದ ಶಶಿ ತರೂರ್ “ಚಲನಚಿತ್ರವನ್ನು ನಿಷೇಧಿಸಲು ಕರೆ ನೀಡುತ್ತಿಲ್ಲ. ಆದರೆ ಇದು ರಾಜ್ಯದ ನೈಜತೆಯನ್ನು ತಪ್ಪಾಗಿ ನಿರೂಪಿಸುತ್ತದೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.

“ನಾನು ಸಿನಿಮಾವನ್ನು ಬ್ಯಾನ್​ ಮಾಡಿ ಎಂದು ಹೇಳುತ್ತಿಲ್ಲ. ಆದರೆ ವಾಸ್ತವವನ್ನು ತಪ್ಪಾಗಿ ನಿರೂಪಿಸಲಾಗುತ್ತಿದೆ. ಅಭಿವ್ಯಕ್ತಿ ಸ್ವಾತಂತ್ಯ ದುರುಪಯೋಗವಾಗುತ್ತಿದೆ. ಇದನ್ನು ಪ್ರಶ್ನಿಸುವ ಹಕ್ಕು ಕೇರಳಿಗರಿಗೆ ಇದೇ ಅನ್ನೋದು ನನ್ನ ಭಾವನೆ” ಎಂದು ಹೇಳಿದ್ದಾರೆ.

ಅದಾ ಶರ್ಮಾ ನಟಿಸಿರುವ ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಮೇ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕೇರಳದಲ್ಲಿ ಸುಮಾರು 32 ಸಾವಿರ ಮಹಿಳೆಯರನ್ನು ಮತಾಂತರಗೊಳಿಸಿ ಇಸ್ಲಾಮಿಕ್ ಸ್ಟೇಟ್‌ನ ಸದಸ್ಯರನ್ನಾಗಿ ಮಾಡಲಾಗಿದೆ ಎಂಬ ಕಥಾವಸ್ತುವನ್ನು ಸಿನಿಮಾ ಹೊಂದಿದೆ.

ಈಗಾಗಲೇ ಟ್ರೇಲರ್​ ರಿಲೀಸ್​ ಆಗಿದ್ದು, ಸಿನಿಮಾ ವಿರುದ್ಧ ಟೀಕೆಗಳು ಕೇಳಿ ಬರುತ್ತಿವೆ. ಚಿತ್ರವನ್ನು ಬ್ಯಾನ್​ ಮಾಡುವಂತೆ ಅನೇಕ ರಾಜಕೀಯ ವ್ಯಕ್ತಿಗಳು, ಮುಸ್ಲಿಂ ಸಂಘಟನೆಗಳು ಒತ್ತಾಯಿಸುತ್ತಿವೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!