ಚೇತನ್ ವಿರುದ್ಧ ದೂರು ದಾಖಲು

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ನಟ ಚೇತನ್ ವಿರುದ್ಧ ಧಾರವಾಡದಲ್ಲಿ ಮತ್ತೊಂದು ಕೇಸ್ ದಾಖಲಾಗಿದೆ.

ಧಾರವಾಡ ಉಪನಗರ ಠಾಣೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಚೇತನ್ ವಿರುದ್ಧ ದೂರು ದಾಖಲಿಸಿದ್ದಾರೆ. ಚೇತನ್ ಭಾರತದ ಪ್ರಜೆಯೇ ಅಲ್ಲ. ಇಲ್ಲಿಗೆ ಬಂದು ಹಿಂದೂ ಧರ್ಮ ಒಡೆಯಲು ಕೆಲಸ ಮಾಡುತ್ತಿದ್ದಾರೆ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಚೇತನ್ ವಿರುದ್ಧ ಈ ಹಿಂದೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದೂರು ದಾಖಲಿಸಿದ್ದರು.

ಇದೇ ವೇಳೆ ಚೇತನ್ ವಿರುದ್ಧ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ ಎಂದು ಹಿರಿಯ ದೈವರಾಧಕ ಕುಮಾರ ಪಂಪದ ಹೇಳಿದ್ದಾರೆ.

ಸಂಸ್ಕೃತಿಯ ಅವಹೇಳನ ಆದಾಗೆಲ್ಲ ನಾವು ದೈವದ ಮುಂದೆ ಪ್ರಾರ್ಥನೆ ಮಾಡುತ್ತೇವೆ. ನಮ್ಮ ಹಿರಿಯರ ಕಾಲದಿಂದ ನಾವು ಹಿಂದೂ ಸಂಪ್ರದಾಯವನ್ನು ಆರಾಧನೆ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ದೈವಗಳಿಗೆ ಮೂಲ ಶಬ್ದವೇ ತುಳು. ನಾವು ನಂಬಿಕೊಂಡ ಸತ್ಯದ ಮೂಲಕ ಚೇತನ್ ಗೆ ಪ್ರತಿಕ್ರಿಯೆ ಕೊಡುತ್ತೇವೆ ಎಂದಿದ್ದಾರೆ.

ಕಾಂತಾರ ಸಿನಿಮಾದಲ್ಲಿ ಚಿತ್ರಿಸಲಾಗಿರುವ ದೈವ ಕೋಲ ಹಿಂದೂಗಳ ಸಂಪ್ರದಾಯ ಎಂಬುದು ತಪ್ಪು ಎನ್ನುವ ಮೂಲಕ ಚೇತನ್ ಮೈಮೇಲೆ ವಿವಾದ ಎಳೆದುಕೊಂಡಿದ್ದಾರೆ.

ಚೇತನ್ ತಮ್ಮನ್ನು ತಾವು ಬೆಳಕಿಗೆ ತರಲು ಕಾಂತಾರ ಸಿನಿಮಾವನ್ನು ಬಳಸಿದ್ದಾರೆ: ಸ್ವರಾಜ್  ಶೆಟ್ಟಿ – Public TV

Kantara Box Office Collection: The Rishab Shetty-Starrer Opens To A Strong  Start
__

Be the first to comment

Leave a Reply

Your email address will not be published. Required fields are marked *

Translate »
error: Content is protected !!