ಪ್ರಾಣಭಿಕ್ಷೆಗಾಗಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್!

ಡಿ ಗ್ಯಾಂಗ್ ನಿಂದ ಕೊಲೆಯಾಗಿದ್ದ ರೇಣುಕಾಸ್ವಾಮಿ ಪ್ರಾಣಭಿಕ್ಷೆಗಾಗಿ ಅಂಗಲಾಚುತ್ತಿರುವ ಫೋಟೋ ವೈರಲ್ ಆಗುತ್ತಿದೆ.

ರೇಣುಕಾಸ್ವಾಮಿ ಕೊಲೆ ಮಾಡಿದ ಬಳಿಕ ಡಿಲೀಟ್​​ ಮಾಡಿದ್ದ ಫೋಟೋಗಳನ್ನು ಪೊಲೀಸರು ಆರೋಪಿಗಳ ಮೊಬೈಲ್​ನಿಂದ ರಿಟ್ರೀವ್​ ಮಾಡಿದ್ದಾರೆ. 10ಕ್ಕೂ ಹೆಚ್ಚು ಫೋಟೋ ರಿಟ್ರೀವ್ ಮಾಡಿದ್ದಾರೆ ಎನ್ನಲಾಗುತ್ತಿದೆ. ವಿನಯ್ ಮೊಬೈಲ್​ನಲ್ಲಿ ರೇಣುಕಾಸ್ವಾಮಿ ಫೋಟೋ ಪತ್ತೆಯಾಗಿತ್ತು. ಆರೋಪಿ ವಿನಯ್ ಮೊಬೈಲ್​​ನಲ್ಲಿ ಫೋಟೋ ಕ್ಲಿಕ್ಕಿಸಿ ಡಿಲೀಟ್ ಮಾಡಿದ್ದ. ಡಿಲೀಟ್ ಆದ ಫೋಟೋಗಳನ್ನು FSL ಟೀಂ ​ರಿಟ್ರೀವ್ ಮಾಡಿದೆ.

ಕಿಡ್ನಾಪ್ ಮಾಡಿದ ಬಳಿಕ ಆರೋಪಿಗಳು ರೇಣುಕಾಸ್ವಾಮಿಯನ್ನ ಶೆಡ್​ಗೆ ಕರೆ ತಂದಿದ್ದರು. ಬಳಿಕ ಆತನಿಗೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ಮಾಡಿದ್ದರು. ಪವನ್, ಧನರಾಜ್ ಮತ್ತು 5 ಮಂದಿಯಿಂದ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ. ಎಲೆಕ್ಟ್ರಿಕ್ ಮೆಗ್ಗರ್​ನಿಂದ   ಕೈಗಳಿಗೆ ಬರೆ ಹಾಕಿ,  ಶೆಡ್​ನಲ್ಲಿ ನಿಲ್ಲಿಸಿದ್ದ ವಾಹನಗಳ ಬಳಿ ಚೆನ್ನಾಗಿ ಹೊಡೆದು ಅಲ್ಲೇ ಬಿಸಾಡಿದ್ದಾರೆ ಎನ್ನಲಾಗುತ್ತಿದೆ.

ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡುವಾಗ ಗೇಟ್ ಹೊರಗಿದ್ದ ಸೆಕ್ಯೂರಿಟಿ ಒಳಗೆ ಬಂದಿದ್ದಾರೆ. ಹಲ್ಲೆ ಮಾಡಿದನ್ನು ಸೆಕ್ಯೂರಿಟಿ ಗಾರ್ಡ್ ಕಣ್ಣಾರೆ ನೋಡಿದ್ದಾರೆ. ಬಳಿಕ  ವಿನಯ್​ಗೆ ಫೋನ್​ ಮಾಡಿದ್ದಾರೆ ಎನ್ನಲಾಗುತ್ತಿದೆ.  ಪ್ರಕರಣದಲ್ಲಿ ಸೆಕ್ಯೂರಿಟಿ ಗಾರ್ಡ್ ಐ ವಿಟ್ನೇಸ್ ಆಗಿದ್ದು, ಈ ವೇಳೆ ವಿನಯ್ ಅವರು ನಮ್ಮವರೇ ಬಿಡು ಎಂದು ಸೆಕ್ಯೂರಿಟಿ ಗಾರ್ಡ್​ ಬಳಿ ಹೇಳಿದ ಎನ್ನಲಾಗುತ್ತಿದೆ. ನಂತರ ರೇಣುಕಾಸ್ವಾಮಿ ಫೋಟೋ ಕಳಿಸುವುದಕ್ಕೆ ವಿನಯ್ ಹೇಳಿದ್ದಾನೆ.  ವಿನಯ್ ಆ ಫೋಟೋಗಳನ್ನು ನಟ ದರ್ಶನ್​ಗೆ ತೋರಿಸಿದ್ದಾನೆ. ಫೋಟೋ  ನೋಡಿದ ಬಳಿಕ ದರ್ಶನ್ ಶೆಡ್​ಗೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಗಾಯಗೊಂಡ ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ರಿಟ್ರೀವ್​ ಬಳಿಕ ಸಿಕ್ಕಿದೆ. ತನ್ನ ಬಿಟ್ಟು ಬಿಡುವಂತೆ ಬೇಡಿಕೊಂಡ ಫೋಟೋ ಕಾಣಿಸಿದೆ.  ಮೈಮೇಲೆ ಹಾಕಿದ್ದ ಆತನ ಬನಿಯನ್  ಕಿತ್ತು ಹಾಕಿರುವುದನ್ನು ಫೋಟೋ ಕಾಣಿಸಿದೆ. ದರ್ಶನ್ ಶೆಡ್​ಗೆ ಬಂದು ರೇಣುಕಾಸ್ವಾಮಿ ಮೇಲೆ ದಾಳಿ ಮಾಡಿದ್ದಾರೆ. ರೇಣುಕಾಸ್ವಾಮಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಸಿನಿಮಾ ರೀತಿಯಲ್ಲಿ ಎತ್ತಿ ಬಿಸಾಡಿ ತುಳಿದಿದ್ದಾರೆ ಎನ್ನಲಾಗುತ್ತಿದೆ. ರೇಣುಕಾಸ್ವಾಮಿ ಮುಖಕ್ಕೆ ಶೂ ಕಾಲಿನಿಂದ ಒದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

ಚಾರ್ಜ್​ಶೀಟ್​​ನಲ್ಲಿ ರೇಣುಕಾಸ್ವಾಮಿ ಫೋಟೋಗಳನ್ನು ಲಗತ್ತಿಸಲಾಗಿದೆ. ಇದು ಪ್ರಕರಣದ ಪ್ರಮುಖ ಸಾಕ್ಷಿ ಆಗಿದೆ.

ರೇಣುಕಾಸ್ವಾಮಿ ಫೋಟೋ ವೈರಲ್

Be the first to comment

Leave a Reply

Your email address will not be published. Required fields are marked *

Translate »
error: Content is protected !!