ಈ ವಾರ ತೆರೆಗೆ ‘ದಮಯಂತಿ’

ಶ್ರೀಲಕ್ಷ್ಮೀವೃಷಾದ್ರಿ ಪೆÇ್ರಡಕ್ಷನ್ಸ್ ಲಾಂಛನದಲ್ಲಿ ನವರಸನ್ ಅವರು ನಿರ್ಮಿಸಿರುವ, ರಾಧಿಕಾ ಕುಮಾರಸ್ವಾಮಿ ಪ್ರಧಾನಪಾತ್ರದಲ್ಲಿ ಅಭಿನಯಿಸಿರುವ `ದಮಯಂತಿ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ನವರಸನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆ ಸೇರಿ ಐದು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಹಾರರ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು, ಹೈದರಾಬಾದ್ ಮುಂತಾದ ಕಡೆ 67ದಿನಗಳ ಚಿತ್ರೀಕರಣ ನಡೆದಿದೆ.
ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪಿ.ಕೆ.ಎಚ್ ದಾಸ್ ಅವರ ಛಾಯಾಗ್ರಹಣವಿದೆ. ಮಹೇಶ್ ರೆಡ್ಡಿ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ರಾಧಿಕಾ ಕುಮಾರಸ್ವಾಮಿ, ಭಜರಂಗಿ ಲೋಕಿ, ಸಾಧುಕೋಕಿಲ, ತಬಲನಾಣಿ, ಮಿತ್ರ, ನವೀನ್ ಕೃಷ್ಣ, ಹೊನ್ನವಳ್ಳಿ ಕೃಷ್ನ, ರವಿಗೌಡ, ಬಲ ರಾಜವಾಡಿ, ವೀಣಾಸುಂದರ್, ಕೆಂಪೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!