21 ವರ್ಷದ ಬಳಿಕ ಒಂದಾದ ದರ್ಶನ್-ಪ್ರೇಮ್

ಚಾಲೆಂಜಿಂಗ್‌ ಸ್ಟಾರ್‌  ದರ್ಶನ್ ಹಾಗೂ ಪ್ರೇಮ್ 21 ವರ್ಷದ ಬಳಿಕ ಒಂದಾಗುತ್ತಿದ್ದಾರೆ. ದರ್ಶನ್ ಹುಟ್ಟುಹಬ್ಬದ ದಿನ ಹೊಸ ಸಿನಿಮಾದ ಘೋಷಣೆ ಮಾಡಲಾಗಿದೆ.

ದರ್ಶನ್ ನಟಿಸುತ್ತಿರುವ ಹೊಸ ಸಿನಿಮಾದ  ಪ್ರೋಮೊ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಸಿನಿಮಾ ಘೋಷಣೆಯನ್ನು ಮಾಡಿದೆ. ಆಂಜನೇಯ ಗದೆ ಜತೆ ‘ನನ್ನ ಕೊನೆ ಉಸಿರಿರೋವರೆಗೂ ಈ ಭೂಮಿ ಮೇಲೆ, ನಿನ್ನ ಒಂದ್ ಹನಿ ರಕ್ತಾನೂ ಸೋಕೋದಕ್ಕೆ ನಾನ್ ಬಿಡಲ್ಲ’ ಎಂದು ದರ್ಶನ್​ರ ಹಿನ್ನೆಲೆ ಧ್ವನಿ ಕೇಳಿ ಬರುತ್ತದೆ. ಹಿನ್ನೆಲೆಯಲ್ಲಿ ‘ಜೈ ಶ್ರೀರಾಮ್’ ಘೋಷಣೆಗಳು ಕೇಳಿ ಬರುತ್ತದೆ.

ಈ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್​ನಿಂದ ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾದ ಪಾತ್ರವರ್ಗ, ತಂತ್ರಜ್ಞರ ಘೋಷಣೆ ಇನ್ನಷ್ಟೆ ಆಗಬೇಕಿದೆ. ಸಿನಿಮಾ 2025ರಲ್ಲಿ ಬಿಡುಗಡೆ ಆಗಲಿದೆ ಎಂದು ಪ್ರೋಮೊನಲ್ಲಿ ಹೇಳಲಾಗಿದೆ.

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಜನುಮದಿನದಂದು ಸಾಲು ಸಾಲು ಸಿನಿಮಾಗಳನ್ನು ಅನೌನ್ಸ್‌ ಮಾಡಿದ್ದಾರೆ. ಶೈಲಜಾ ನಾಗ್​ ಮತ್ತು ಬಿ. ಸುರೇಶ ಅವರು ನಿರ್ಮಾಣದ D 59 ಸಿನಿಮಾ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ತರುಣ್​ ಸುಧೀರ್​ ಮತ್ತು ದರ್ಶನ್​ ಅವರ ಕಾಂಬಿನೇಶನ್‌​ನಲ್ಲಿ ಸಿನಿಮಾ ಮೂಡಿಬರಲಿದ್ದು, ಇದರಲ್ಲಿ ಐತಿಹಾಸಿಕ ಕಥಾಹಂದರ ಇರಲಿದೆ.

ದರ್ಶನ್ ಅವರ ಜತೆ ʻಅಂಬರೀಶʼ ಸಿನಿಮಾ ಮಾಡಿದ್ದ ಮಹೇಶ್ ಸುಖಧರೆ, ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರ ಘೋಷಿಸಿದ್ದಾರೆ. ಸಚ್ಚಿದಾನಂದ ಇಂಡುವಾಳ ಹೊಸ ಚಿತ್ರ ಘೋಷಿಸಿದ್ದಾರೆ. ಇದನ್ನು ತರುಣ್ ಸುಧೀರ್  ನಿರ್ದೇಶಿಸುತ್ತಿದ್ದಾರೆ. ರಮೇಶ್ ಪಿಳ್ಳೈ, ಮೋಹನ್ ನಟರಾಜನ್, ಕೆ.ಮಂಜುನಾಥ್, ರಘುನಾಥ್ ಸೋಗಿ, ದರ್ಶನ್ ಸಿನಿಮಾ ನಿರ್ಮಾಣ ಮಾಡಲು ಆಸಕ್ತಿ ತೋರಿಸಿರುವ ಉಳಿದ ನಿರ್ಮಾಪಕರು. ಇವರ ಚಿತ್ರಕ್ಕೆ ನಿರ್ದೇಶಕರು ಯಾರೆಂಬುದು ತಿಳಿದು ಬಂದಿಲ್ಲ.

—–


 

Be the first to comment

Leave a Reply

Your email address will not be published. Required fields are marked *

Translate »
error: Content is protected !!