ದರ್ಶನ್ ಗೆ ಬೆಂಬಲ ಸೂಚಿಸಿದ ಆದಿತ್ಯ

ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಣ ವಿವಾದಕ್ಕೆ ಸಂಬಂಧಿಸಿದಂತೆ ದರ್ಶನ್ ಅವರಿಗೆ ನಟ ಆದಿತ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ.
” ನಾನು ಎಂದಿಗೂ ನಿನ್ನ ಪರವಾಗಿ ಇರುತ್ತೇನೆ. ನಾವು ಅಭಿಮಾನಿಗಳು ನಿಮ್ಮನ್ನು ಬೆಂಬಲಿಸುತ್ತೇವೆ. ಸದಾ ನಿಮ್ಮ ಜೊತೆ ಇರ್ತೇವೆ” ಎಂದು ಆದಿತ್ಯ ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ ರಾಬರ್ಟ್ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದ ಶಿವರಾಜ್ ಕೆಆರ್ ಪೇಟೆ ಅವರು ದರ್ಶನ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ಈ ನಾಟಕೀಯ ಜಗತ್ತಿನಲ್ಲಿ ತನ್ನ ರೀತಿಯಲ್ಲಿ ಬದುಕಬೇಕು ಎಂದು ಹೊರಟಾಗ ವಿವಾದಗಳು ಸುತ್ತಿಕೊಳ್ಳುವುದು ಸಾಮಾನ್ಯ. ಆದರೂ ಇಂತಹವುಗಳನ್ನೆಲ್ಲಾ ಎದುರಿಸಿ ನಿಲ್ಲೋ ಶಕ್ತಿ ದರ್ಶನ್ ಸರ್ ಗಿದೆ. ಅವರ ಅಸಂಖ್ಯಾ ಅಭಿಮಾನಿಗಳ ಹಾರೈಕೆಯು ಅವರೊಂದಿಗಿದೆ” ಎಂದು ಅವರು ಹೇಳಿದ್ದಾರೆ.

ರಾಬರ್ಟ್ ಚಿತ್ರದ ಇನ್ನೊಬ್ಬ ನಟ ವಿನೋದ್ ಪ್ರಭಾಕರ್ ಅವರು ಸಹ ದರ್ಶನ್ ಬೆಂಬಲಕ್ಕೆ ನಿಂತಿದ್ದಾರೆ. “ಡಿ ಬಾಸ್ ಬಗ್ಗೆ ಯಾರೂ ಸರ್ಟಿಫಿಕೇಟ್ ಕೊಡುವ ಅಗತ್ಯ ಇಲ್ಲ. ಅವರ ವ್ಯಕ್ತಿತ್ವ, ಸಹಾಯ ಮಾಡುವ ಗುಣ ಇನ್ನೊಬ್ಬರನ್ನು ಪ್ರೋತ್ಸಾಹಿಸಿ ಬೆಳೆಸುವ ಮನಸು ನೋಡಬೇಕಿದೆ. ಅವರ ಅಭಿಮಾನಿಗಳು ಇನ್ನೂ ಹತ್ತು ಪಟ್ಟು ಬೆಳೆಸುತ್ತಾರೆ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ” ಎಂದು ಫೇಸ್ ಬುಕ್ ನಲ್ಲಿ ಹೇಳಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!