ದರ್ಶನ್ ಗೆ ಉಮಾಪತಿ ಸವಾಲು!

”ಕಾಟೇರ ಕಥೆ ಬರೆಸಿದ್ದು ನಾನೇ. ಕಾಟೇರ ಕಥೆ ಬರೆಯೋದಕ್ಕೆ ಕಾಸು ಕೊಟ್ಟಿದ್ದೂ ನಾನೇ” ಎಂದು ನಿರ್ಮಾಪಕ ಉಮಾಪತಿ ಸವಾಲು ಹಾಕಿದ್ದಾರೆ.

50 ದಿನ ಥಿಯೇಟರ್ ನಲ್ಲಿ ಪ್ರದರ್ಶನ ಕಂಡು ಯಶಸ್ಸು ಗಳಿಸಿರುವ ‘ಕಾಟೇರ’  ಸಿನಿಮಾದ ಕತೆ ಮತ್ತು ಟೈಟಲ್ ತಾವು ಮಾಡಿಸಿದ್ದು ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಹೇಳಿಕೆಗೆ ಕಾರ್ಯಕ್ರಮದಲ್ಲಿ ನಟ ದರ್ಶನ್ ನೀಡಿದ್ದ ತಿರುಗೇಟಿನಿಂದ ವಿವಾದ ಹುಟ್ಟಿಕೊಂಡಿದೆ.

ಉಮಾಪತಿ ಶ್ರೀನಿವಾಸ್ ವಿರುದ್ಧ ಗರಂ ಆಗಿದ್ದ ದರ್ಶನ್ ಅವರು ಕಾರ್ಯಕ್ರಮದಲ್ಲಿ “ಅಯ್ಯೋ ತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಹಾಗಾದರೆ ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?’ ಕಾಟೇರ ಕಥೆ ಬಿಟ್ಟು ಕೊಟ್ಟಿದ್ದು ಯಾಕೆ? ಕೊಟ್ಟಿದ್ದು ಮಾಡಿದ್ದನ್ನ ಹೇಳಬಾರದು. ಒಂದ್ಸಲ ಆಗಿರೋ ಘಟನೆಯಿಂದ ಬುದ್ದಿ ಕಲಿತಿಲ್ಲ. ಮತ್ತೆ ಮತ್ತೆ ಬಂದು ಯಾಕೆ ಗುಮ್ಮಿಸ್ಕೊಳ್ತಿದ್ದೀಯಾ” ಎಂದು ಕೇಳಿದ್ದರು.

ದರ್ಶನ್ ಅವರು ಆಡಿದ ಮಾತುಗಳಿಂದ ಸಿಟ್ಟಾಗಿರುವ  ಉಮಾಪತಿ ಮಾಧ್ಯಮಗಳ ಮೂಲಕ ನಟ ದರ್ಶನ್ ಗೆ ತಿರುಗೇಟು ನೀಡಿದ್ದಾರೆ.

ಉಮಾಪತಿ, ”ನಾನು ಕೂಡ ಟೈಂ ಬಂದಾಗ ಗುಮ್ಮಿದ್ದೀನಿ. ಇವರ ಮನೆ ಉದ್ಧಾರ ಮಾಡಲು ನಮ್ಮ ಮನೆಯ ಹಣ ಬೇಕಾ?” ಎಂದು ಪ್ರಶ್ನೆ ಮಾಡಿದ್ದಾರೆ.

“ನಾನು ಅವರಷ್ಟು ದೊಡ್ಡ ನಟನಲ್ಲ. ಹಾಗೇ ಅವರಿಗೆ ಉತ್ತರ ಕೊಡುವಷ್ಟು ದೊಡ್ಡವ ಕೂಡ ಅಲ್ಲ. ನಿಜ ಏನು ಅನ್ನೋದು ನನಗೆ ಗೊತ್ತು. ಅವರ ಹೊಟ್ಟೆ ತುಂಬಿದೆ. ಮಾತನಾಡಿದ್ದಾರೆ, ಮಾತನಾಡಲಿ. ಅವರುಏನೋ ಅಂದರು ಅಂತ ನಾನು ಅನ್ನೋದು ಸರಿಯಲ್ಲ. ಅನ್ನೋಕೆ ನನಗೆ ಎರಡು ನಿಮಿಷ ಸಾಕು. ನಾನು ಸುಮ್ಮನೆ ಬಂದಿರೋನಲ್ಲ. ತಾಕತ್ತಿರೋದಕ್ಕೆ ಇಲ್ಲಿ ನಿಂತಿದ್ದೀನಿ. ಯಾರಿಗೂ ಭಯ ಪಡೋ ಅವಶ್ಯಕತೆ ಇಲ್ಲ. ಸಮಯ-ಸಂದರ್ಭ ನೋಡಿ ಉತ್ತರ ಕೊಡ್ತೀನಿ. ಗುಮ್ಮೋ ಟೈಂ ಅಲ್ಲಿ ನಾನು ಸರಿಯಾಗಿಯೇ ಗುಮ್ಮಿದ್ದೀನಿ ಅದು ಅವರಿಗೂ ಗೊತ್ತಿದೆ” ಎಂದು ಹೇಳಿದ್ದಾರೆ.

”ಇದೇ ಪದ ಬಳಕೆಯಿಂದ ಮಾಧ್ಯಮಗಳಿಂದ ಬ್ಯಾನ್ ಆಗಿದ್ದರು. ಬ್ಯಾನ್ ಮಾಡಿದರೂ ಪದಬಳಕೆ ಹೇಗೆ ಮಾಡೋದು ಎಂಬುದನ್ನು ಕಲಿಯದೇ ಹೋದರೆ ಹೇಗೆ? ವೇದಿಕೆ ಸಿಕ್ಕಿದೆ ಅಂತ ಏನು ಬೇಕಾದರೂ ಮಾತನಾಡಬಹುದಾ? ಏನ್ ಬೇಕಾದರೂ ಮಾಡಿಬಿಡ್ತೀರಾ? ತಾಕತ್ತಿದ್ದರೆ ಮಾಡಿ ನೋಡೋಣ” ಎಂದು ಸವಾಲು ಎಸೆದಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!