ದೀಪಾವಳಿಗೆ ಬರುತ್ತಿದೆ ‘ಮುಗಿಲ್ ಪೇಟೆ’ ಚಿತ್ರ

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನು ರವಿಚಂದ್ರನ್ ನಾಯಕನಾಗಿ ನಟಿಸಿರುವ ‘ಮುಗಿಲ್ ಪೇಟೆ’ ಸಿನಿಮಾ ದೀಪಾವಳಿ ವೇಳೆ ತೆರೆಗೆ ಬರಲಿದೆ ಎನ್ನುವ ಮಾಹಿತಿ ಲಭಿಸಿದೆ.

ಚಿತ್ರದ ಪ್ರಥಮ ಪ್ರತಿ ಸದ್ಯದಲ್ಲೇ ಸಿದ್ದವಾಗಲಿದೆ. ಬಳಿಕ ಪರಿಸ್ಥಿತಿ ನೋಡಿಕೊಂಡು ಚಿತ್ರವನ್ನು ದೀಪಾವಳಿ ವೇಳೆ ಬೆಳ್ಳಿ ತೆರೆ ಮೇಲೆ ತರಲು ಚಿತ್ರತಂಡ ನಿರ್ಧರಿಸಿದೆ.
ಈಗಾಗಲೇ ಮುಗಿಲ್ ಪೇಟೆ ಚಿತ್ರದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾದಲ್ಲಿ ನಾಯಕಿಯಾಗಿ ಕಯಾದು ಲೋಹರ್ ನಟಿಸಿದ್ದಾರೆ. ರಿಷಿ, ಅವಿನಾಶ್, ತಾರಾ ಅನುರಾಧ, ಸಾಧುಕೋಕಿಲ, ರಂಗಾಯಣ ರಘು ಮೊದಲಾದ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.

ಚಿತ್ರವನ್ನು ಮೋತಿ ಮೂವೀ ಮೇಕರ್ಸ್ ಲಾಂಛನದಲ್ಲಿ ರಕ್ಷಾ ವಿಜಯ್ ಕುಮಾರ್ ನಿರ್ಮಿಸಿದ್ದಾರೆ. ಭರತ್ ಎಸ್. ನಾವುಂದ ರಚನೆ, ನಿರ್ದೇಶನ ಮಾಡಿದ್ದಾರೆ. ಭರತ್ ಈ ಹಿಂದೆ ‘ಅಡಚಣೆಗಾಗಿ ಕ್ಷಮಿಸಿ’ ಚಿತ್ರ ನಿರ್ದೇಶಿಸಿದ್ದರು. ಇದು ಅವರ ಎರಡನೇ ಚಿತ್ರವಾಗಿದೆ.
ಈ ರೊಮ್ಯಾಂಟಿಕ್ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮ್ ಸಂಗೀತ ಇದೆ. ರವಿವರ್ಮ (ಗಂಗು) ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ರವಿವರ್ಮ, ವಿಜಯ್ ಸಾಹಸ ನಿರ್ದೇಶನ, ಹರ್ಷ, ಮುರಳಿ, ಮೋಹನ್ ನೃತ್ಯ ನಿರ್ದೇಶನ, ಸತೀಶ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ.

ಚಿತ್ರಪ್ರೇಮಿಗಳು ಕ್ರೇಜಿಸ್ಟಾರ್ ಪುತ್ರನ ನಟನೆಯನ್ನು ಬೆಳ್ಳಿ ತೆರೆಯ ಮೇಲೆ ನೋಡಿ ಆನಂದಿಸಲು ಕಾತರರಾಗಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!