’ಧೀರಸಾಮ್ರಾಟ್’ ಹಾಡುಗಳು ಬಿಡುಗಡೆ

ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಧೀರಸಾಮ್ರಾಟ್’ ಸಿನಿಮಾದ ಹಾಡು ಬಿಡುಗಡೆಗೊಂಡಿದೆ.

ಪ್ರಜ್ವಲ್ ದೇವರಾಜ್ ಹಾಡು ಬಿಡುಗಡೆ ಮಾಡಿ ತಂಡಕ್ಕೆ ಶುಭಹಾರೈಸಿದ್ದಾರೆ. ಈ ಸಂದರ್ಭದಲ್ಲಿ ನಾಯಕ ರಾಕೇಶ್ಬಿರದಾರ್, ನಾಯಕಿ ಅದ್ವಿತಿಶೆಟ್ಟಿ, ನಾಗೇಂದ್ರಅರಸು, ಯತಿರಾಜ್, ರವೀಂದ್ರನಾಥ್, ಇಂಚರ, ಸಂಕಲ್ಪ್ಪಾಟೀಲ್, ಹರೀಶ್ಅರಸು, ಸಾಹಸ ಸಂಯೋಜಕ ಕೌರವ ವೆಂಕಟೇಶ್, ಸಂಭಾಷಣೆಕಾರ ಸಾಯಿರಾಮ್ ಹಾಜರಿದ್ದರು.

ಸುಮಾರು ಒಂದೂವರೆ ದಶಕಕ್ಕೂ ಹೆಚ್ಚು ಕಾಲ ವಾಹಿನಿಯಲ್ಲಿ ನಿರೂಪಕ, ಕಾರ್ಯಕ್ರಮದ ಮುಖ್ಯಸ್ಥನಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಪವನ್ಕುಮಾರ್(ಪಚ್ಚಿ) ಸಿನಿಮಾಕ್ಕೆ ಕಥೆ ಬರೆದು ನಿರ್ದೇಶನ ಮಾಡುವ ಜತೆಗೆ  ಬಣ್ಣ ಹಚ್ಚಿದ್ದಾರೆ. ಶೀರ್ಷಿಕೆ ಗೀತೆಗೆ ಸಾಹಿತ್ಯ ಮತ್ತು ಸಂಭಾಷಣೆಯಲ್ಲಿ ತೊಡಗಿಕೊಂಡಿದ್ದಾರೆ.

ಕುಟುಂಬ ಸಮೇತ ನೋಡಬಹುದಾದ ಸೆಸ್ಪನ್ಸ್ ಥ್ರಿಲ್ಲರ್ ಕಥೆಯಲ್ಲಿ ಐದು ಧೀರ ಹುಡುಗರ ಗೆಳತನ ಹೇಗಿರುತ್ತೆ ಎಂಬುದನ್ನು ಹೇಳಲಾಗಿದೆ. ‘ಸಾವಿಗೆ ಸಾವಿಲ್’ ಅಂತ ಅಡಿಬರಹವಿದೆ. ಒಬ್ಬ ವ್ಯಕ್ತಿಗೆ ಸಂಬಂದಿಸಿದಂತೆ ಸಮಾಜದಲ್ಲಿ ಯಾವುದೋ ಒಂದು ವರ್ಗದಲ್ಲಿ ಶೋಷಣೆ ಆಗುತ್ತಿರುತ್ತದೆ. ಇಂತಹ ಮುಖ್ಯ ಅಂಶಗಳನ್ನು ಸನ್ನಿವೇಶಕ್ಕೆ ಬಳಸಲಾಗಿದೆ.

ಶಂಕರಭಟ್,ಶೋಭರಾಜ್, ಬಲರಾಜವಾಡಿ, ರಮೇಶ್ಭಟ್, ಮನಮೋಹನ್ರೈ, ರವಿರಾಜ್, ಜ್ಯೋತಿಮರೂರು, ಮಂಡ್ಯಚಂದ್ರು, ಗಿರಿಗೌಡ, ಪ್ರೇಮ, ಬೇಬಿ ಪರಿಣಿತ, ನಂದಿತ ಮುಂತಾದವರು ನಟಿಸಿದ್ದಾರೆ. ರಾಘವ್ಸುಭಾಷ್ ಸಂಗೀತ, ವೀರೇಶ್.ಎನ್.ಟಿ.ಎ-ಅರುಣ್ಸುರೇಶ್ ಛಾಯಾಗ್ರಹಣ, ಸತೀಶ್ಚಂದ್ರಯ್ಯ ಸಂಕಲನ, ಎ.ಆರ್.ಸಾಯಿರಾಮ್, ಸಾಹಸ ಕೌರವವೆಂಕಟೇಶ್, ನೃತ್ಯ ಮುರಳಿ-ಕಿಶೋರ್-ಸಾಗರ್ ಅವರದಾಗಿದೆ.

ಬೆಂಗಳೂರು, ತುಮಕೂರು, ಚಿತ್ರದುರ್ಗ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಯುಎ ಪ್ರಮಾಣಪತ್ರ ಪಡೆದುಕೊಂಡಿರುವ ಸಿನಿಮಾ ಫೆಬ್ರವರಿ 16ರಂದು ತೆರೆಗೆ ಬರಲಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!