ಕೊಡಗಿನಲ್ಲಿ “ದಿಲ್ ಖುಷ್” ಶೂಟಿಂಗ್

“ದಿಲ್ ಖುಷ್” ಚಿತ್ರದ ಮೂರನೇ ಹಂತದ ಚಿತ್ರೀಕರಣ ಶೀಘ್ರ ಆರಂಭವಾಗಲಿದೆ.

ಇದು ರೊಮ್ಯಾಂಟಿಕ್ ಕಾಮಿಡಿ ಜೊತೆಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಎಂದು ಚಿತ್ರತಂಡ ತಿಳಿಸಿದೆ.

ದ್ವಿತೀಯ ಹಂತದ ಚಿತ್ರೀಕರಣ ಕೊಡಗಿನ ಸೋಮವಾರಪೇಟೆ ಹಾಗೂ ಶನಿವಾರಸಂತೆಯಲ್ಲಿ ಒಂಭತ್ತು ದಿನಗಳ ಕಾಲ ನಡೆದಿದೆ. ಈ ಹಂತದಲ್ಲಿ ಮಾತಿನ ಭಾಗ ಹಾಗೂ ಒಂದು ಸಾಹಸ ಸನ್ನಿವೇಶದ ಚಿತ್ರೀಕರಣವಾಗಿದೆ. ಅಶೋಕ್ ಅವರು ಸಂಯೋಜಿಸಿರುವ ಈ ಸಾಹಸ ಸನ್ನಿವೇಶ ಕೆಸರುಗದ್ದೆಯಲ್ಲಿ ಚಿತ್ರೀಕರಣ ಆಗಿದ್ದು, ಸಾಹಸಪ್ರಿಯರಿಗೆ ಮೆಚ್ಚುಗೆಯಾಗುವ ನಿರೀಕ್ಷೆ ಇದೆ.

ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸುತ್ತಿರುವ “ದಿಲ್ ಖುಷ್” ಚಿತ್ರವನ್ನು
ಪ್ರಮೋದ್ ಜಯ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಸಿಂಪಲ್ ಸುನಿ ಅವರ ಬಳಿ ಕಾರ್ಯ ನಿರ್ವಹಿಸಿರುವ ಪ್ರಮೋದ್ ಜಯ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ ಆಗಿದೆ.

ಚಿತ್ರದಲ್ಲಿ ಐದು ಸುಮಧುರ ಹಾಡುಗಳಿದ್ದು, ಪ್ರಸಾದ್ ಕೆ ಶೆಟ್ಟಿ ಅವರ ಸಂಗೀತ ನಿರ್ದೇಶನವಿದೆ. ನಿವಾಸ್ ನಾರಾಯಣ್ ಛಾಯಾಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿದೆ.

ರಂಜಿತ್ ಮೊದಲ ಬಾರಿಗೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸ್ಪಂದನ ಸೋಮಣ್ಣ “ದಿಲ್ ಖುಷ್ ” ಚಿತ್ರದ ನಾಯಕಿ. ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್, ಮಧುಸೂದನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!