ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಕೆಡಿ’ ಬಿಡುಗಡೆಗೆ ಎದುರು ನೋಡುತ್ತಿರುವ ನಟ ಧ್ರುವ ಸರ್ಜಾ ಹೊಸ ಚಿತ್ರವೊಂದಕ್ಕೆ ಚರ್ಚೆಯಲ್ಲಿ ತೊಡಗಿದ್ದಾರೆ.
ದುನಿಯಾ, ಅಣ್ಣಾ ಬಾಂಡ್ ಮತ್ತು ಟಗರು ಮುಂತಾದ ಹಿಟ್ ಚಿತ್ರಗಳ ಹಿಂದಿನ ನಿರ್ದೇಶಕ ಸೂರಿ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸೂರಿ ಸದ್ಯಕ್ಕೆ ಪಿಆರ್ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲ್ಮ್ಸ್ ಮತ್ತು ಕೆಆರ್ಜಿ ಸ್ಟುಡಿಯೋಸ್ ಸಹಯೋಗದೊಂದಿಗೆ ಯುವರಾಜ್ಕುಮಾರ್ ಅವರೊಂದಿಗಿನ ಚಿತ್ರ ಪ್ರಾರಂಭಿಸಲು ತಯಾರಿ ನಡೆಸುತ್ತಿದ್ದರು. ಆದರೆ ಸದ್ಯಕ್ಕೆ ಈ ಯೋಜನೆ ಸ್ಥಗಿತಗೊಂಡಿದೆ ಎಂದು ತಿಳಿದು ಬಂದಿದೆ. ಸೂರಿ ಸದ್ಯ ಧ್ರುವ ಸರ್ಜಾ ಅವರೊಂದಿಗೆ ಮುಂದಿನ ಚಿತ್ರಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಮಾತುಕತೆ ಇನ್ನೂ ಆರಂಭಿಕ ಹಂತದಲ್ಲಿವೆ. ಇಬ್ಬರು ಭೇಟಿಯಾಗಿ ಮಾತನಾಡಿದ್ದಾರೆ. ಆದರೆ ಚಿತ್ರ ಪ್ರಾರಂಭಿಸಲು ಇನ್ನೂ ಸ್ಪಷ್ಟಪಡಿಸಿಲ್ಲ ಎನ್ನಲಾಗಿದೆ. ಧ್ರುವ ಸರ್ಜಾ ಮತ್ತು ಸೂರಿ ಚಿತ್ರ ತೀವ್ರ ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದ ಅಧಿಕೃತ ಘೋಷಣೆ ಯಾವಾಗ ಬರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಹಲವು ನಿರ್ಮಾಣ ಸಂಸ್ಥೆಗಳೊಂದಿಗೆ ಚರ್ಚೆ ನಡೆಸುತ್ತಿರುವ ಧ್ರುವ ಸರ್ಜಾ ಸರಿಯಾದ ಕಥೆಗಾಗಿ ಕಾಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕೆರೆಬೇಟೆ ನಿರ್ದೇಶಕ ರಾಜ್ ಗುರು ಜೊತೆಗೂ ಧ್ರುವ ಸರ್ಜಾ ಅವರು ಮಾತುಕತೆಯಲ್ಲಿ ತೊಡಗಿದ್ದಾರೆ ಎನ್ನುವ ಊಹಾಪೋಹಗಳು ಕೇಳಿ ಬಂದಿವೆ.
—-





Be the first to comment