‘ಕನ್ನಡದ ಕುಳ್ಳ’ ಖ್ಯಾತಿಯ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕ, ‘ಕನ್ನಡದ ಕುಳ್ಳ’ ಖ್ಯಾತಿಯ ದ್ವಾರಕೀಶ್ ಅವರು ನಿಧನರಾಗಿದ್ದಾರೆ.

ದ್ವಾರಕೀಶ್ ಅವರ ಆರೋಗ್ಯದಲ್ಲಿ ಕೆಲ ತಿಂಗಳ ಹಿಂದೆ ಏರುಪೇರಾಗಿತ್ತು. ಅನಾರೋಗ್ಯದಿಂದ ದ್ವಾರಕೀಶ್ ಅವರು ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಅವರು ನಿಧನರಾಗಿರುವ ಸುದ್ದಿಯನ್ನು ಪುತ್ರ ಯೋಗೇಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮೈಸೂರಿನ ಹುಣಸೂರಿನಲ್ಲಿ ಜನಿಸಿದ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದ ದ್ವಾರಕೀಶ್ ಅವರು ನಟನೆಯ ಆಸಕ್ತಿಯಿಂದ ಚಿತ್ರರಂಗಕ್ಕೆ ಕಾಲಿಟ್ಟರು. ‘ವೀರ ಸಂಕಲ್ಪ’ ಸಿನಿಮಾದ ಮೂಲಕ ಅವರು ನಟನೆಗೆ ಇಳಿದರು. ನಟ, ಹಾಸ್ಯ ಕಲಾವಿದ, ಪೋಷಕ ನಟರಾಗಿ ದ್ವಾರಕೀಶ್ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ. ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಅವರು ಹಲವು ಚಿತ್ರಗಳಲ್ಲಿ ನಡೆಸಿದ್ದು, ಕಳ್ಳ ಕುಳ್ಳ ಎಂದೇ ಈ ಜೋಡಿ ಪ್ರಸಿದ್ಧವಾಗಿತ್ತು.

ರಾಜಕುಮಾರ್ ನಟನೆಯ ‘ಮೇಯರ್ ಮುತ್ತಣ್ಣ’ ಸಿನಿಮಾದ ಮೂಲಕ ಅವರು ನಿರ್ಮಾಪಕರಾದರು. ಅವರು 40ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ.

ದ್ವಾರಕೀಶ್ ಅವರು ‘ನೀ ಬರೆದ ಕಾದಂಬರಿ’ ಚಿತ್ರವನ್ನು ಮೊದಲ ಬಾರಿಗೆ ನಿರ್ದಶಿಸಿದರು. ಬಳಿಕ ಡಾನ್ಸ್ ರಾಜ ಡಾನ್ಸ್, ಶ್ರುತಿ, ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ದ್ವಾರಕೀಶ್ ಅವರು ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆಯ ಮೂಲಕ ಕನ್ನಡ ಅಲ್ಲವೇ ತಮಿಳು, ಹಿಂದಿ ಸಿನಿಮಾ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.
——-

Be the first to comment

Leave a Reply

Your email address will not be published. Required fields are marked *

Translate »
error: Content is protected !!