ಮಾನವೀಯತೆ ಮರೆತ ‘ಎಕ್ಕ’ ಚಿತ್ರತಂಡ?

ನಟ ಯುವ ರಾಜ್‌ಕುಮಾರ್ ನಟನೆಯ ಎಕ್ಕ ಚಿತ್ರತಂಡ ಭಾನುವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದು, ಈ ವೇಳೆ ನಟನ ಬೌನ್ಸರ್‌ಗಳು ಇದ್ದ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಯಾದರೂ, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸದೆ ಅಮಾನವೀಯ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ.

ಕಾರು ಮಹಿಳೆಗೆ ಡಿಕ್ಕಿಯಾದ ಪರಿಣಾಮ ಆಕೆಯ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಸಿದ್ಧಗಂಗಾ ಮಠದ ಶಾಲೆಗೆ ಮಗುವನ್ನು ಬಿಟ್ಟು ಹೋಗಲು ಬಳ್ಳಾರಿ ಮೂಲದ ಲಿಂಗಮ್ಮ ಬಂದಿದ್ದರು. ಮಹಿಳೆ ವಾಪಸ್ ತೆರಳುತ್ತಿದ್ದ ವೇಳೆ ಎಕ್ಕ ಚಿತ್ರತಂಡ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿತ್ತು. ಈ ಸಂದರ್ಭ  ಬೌನ್ಸರ್ ಕಾರು ಮಹಿಳೆಗೆ ಡಿಕ್ಕಿಯಾಗಿ ಕಾಲಿಗೆ ಕಾಲಿಗೆ ಗಂಭೀರ ಪೆಟ್ಟಾಗಿದೆ.

ಮಹಿಳೆ ನರಳಾಡುತ್ತ ಆಸ್ಪತ್ರೆಗೆ ಸೇರಿಸುವಂತೆ ಕೋರಿದರೂ,  ಎಕ್ಕ ಚಿತ್ರತಂಡ ಸ್ಥಳದಿಂದ ತೆರಳಿದೆ. ಚಿತ್ರತಂಡದ ಜತೆ ನಟ ಯುವರಾಜ್ ಕುಮಾರ್ ಸಹ ಇದ್ದರು ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಕ್ಯಾತಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.  ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!