ಪುನೀತ್ ಹೆಸರಲ್ಲಿ ಐ ಬ್ಯಾಂಕ್ ತೆರೆಯಲು ಚಿಂತನೆ

ಸ್ಯಾಂಡಲ್​ವುಡ್​ ಯುವರತ್ನ ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಐ ಬ್ಯಾಂಕ್ ತೆರೆಯಲು ಸರ್ಕಾರ ಚಿಂತನೆ ಮಾಡಿದೆ.

ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಕಣ್ಣುಗಳಿಗೆ ಬೇಡಿಕೆ ಹೆಚ್ಚಿದೆ.  ದೃಷ್ಠಿ ದೋಷದಿಂದ ಕಣ್ಣು ಕಳೆದುಕೊಂಡ ಸಾವಿರಾರು ಜನರು ಕಣ್ಣು ಪಡೆಯಲು ಕ್ಯೂನಲ್ಲಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಮಾಸ್ಟರ್ ಪ್ಲಾನ್ ಮಾಡಿದ್ದು ಸರ್ಕಾರಿ ಆಸ್ಪತ್ರೆಗಳಲ್ಲಿ ಪುನೀತ್ ರಾಜ್​​ಕುಮಾರ್ ಹೆಸರಲ್ಲಿ ಐ ಬ್ಯಾಂಕ್ ಓಪನ್ ಮಾಡಲು ಚಿಂತನೆ ನಡೆಸಿದೆ.

ಅನೇಕ ಕಾರಣಗಳಿಂದ ಕಣ್ಣು ಕಳೆದುಕೊಂಡವರು, ದೃಷ್ಠಿ ದೋಷದಿಂದ ಬಳಲುತ್ತಿರುವವರು ಜಗತ್ತು ನೋಡಲು ಕಣ್ಣುಪಡೆಯಲು ಕಾಯುತ್ತಿದ್ದಾರೆ. ಇಂತವರಿಗೆ ದೃಷ್ಠಿ ಭಾಗ್ಯ ನೀಡುವ ಉದ್ದೇಶದಿಂದ ಆರೋಗ್ಯ ಇಲಾಖೆ ಕಣ್ಣು ದಾನ ಹೆಚ್ಚಿಸಲು ಮುಂದಾಗಿದೆ.

ಪುನೀತ್ ರಾಜ್ ಕುಮಾರ್ ಅವರು ಹಠಾತ್ ನಿಧನ ಆದ ಬಳಿಕ ಅವರ ಕಣ್ಣನ್ನು ದಾನ ಮಾಡಲಾಗಿತ್ತು. ಪುನೀತ್ ಅವರ ಪ್ರೇರಣೆಯಿಂದ ಹಲವರು ತಮ್ಮ ನಿಧನದ ಬಳಿಕ ಕಣ್ಣು ದಾನಕ್ಕೆ ಸಹಿ ಹಾಕಿದ್ದರು.

ಕನ್ನಡದ ಮೇರು ನಟ ಡಾ. ರಾಜ್ ಕುಮಾರ್ ಅವರು ನೇತ್ರದಾನ ಮಾಡುವ ಮೂಲಕ ಮೇಲ್ಪಂಕ್ತಿ ಹಾಕಿದ್ದರು.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!