ಧ್ರುವ ಸರ್ಜಾ ವಿರುದ್ಧ ದೂರು ದಾಖಲು

ಸಿನಿಮಾ ಮಾಡುವುದಾಗಿ  ಹಣ ಪಡೆದು ವಂಚಿಸಿದ್ದಾರೆ ಎಂದು ನಟ ಧೃವ ಸರ್ಜಾ ವಿರುದ್ಧ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರಾಘವೇಂದ್ರ ಹೆಗ್ಗಡೆ ಎಂಬವರು ಧೃವ ಸರ್ಜಾ 3.15 ಕೋಟಿ ರೂ. ಹಣ ಪಡೆದು  ವಂಚನೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.  ಬಡ್ಡಿ ಸೇರಿ  9 ಕೋಟಿ ರೂಪಾಯಿ ಆಗಿದೆ ಎಂದು ನಿರ್ಮಾಪಕರು ಆರೋಪಿಸಿದ್ದಾರೆ.

2016ರಲ್ಲಿ ನನ್ನ ಮೊದಲ ಸಿನಿಮಾ ಜಗ್ಗು ದಾದಾ ಯಶಸ್ಸು ಕಂಡಿತು. ಈ ವೇಳೆ ಧ್ರುವ ಸರ್ಜಾ ಅವರು ನನ್ನ ಕಚೇರಿಗೆ ಬಂದು ಸಿನಿಮಾ ಮಾಡುವ ಆಸಕ್ತಿ ತೋರಿಸಿದರು. 2016ರಿಂದ 2018ರವರೆಗೆ ಅವರು ಈ ವಿಚಾರದಲ್ಲಿ ತುಂಬಾ  ಆಸಕ್ತಿ ತೋರಿಸುತ್ತಿದ್ದರು. ದಿ ಸೋಲ್ಜರ್ ಹೆಸರಿನ ಸಿನಿಮಾದ ಸ್ಕ್ರಿಪ್ಟ್  ನೀಡಿದರು ಎಂದು ರಾಘವೇಂದ್ರ ಹೆಗ್ಡೆ  ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸಿನಿಮಾ ಕಾಂಟ್ರ್ಯಾಕ್ಟ್ ಸಹಿ ಮಾಡುವುದಕ್ಕೂ ಮೊದಲು 3 ಕೋಟಿ ರೂ. ಕೊಡುವಂತೆ ಧ್ರುವ ಕೇಳಿದ್ದರು. ಇದರಿಂದ ಫ್ಲ್ಯಾಟ್ ಖರೀದಿಸೋದಾಗಿ ಹೇಳಿದ್ದರು.  ಸಿನಿಮಾದ ಕೆಲಸವನ್ನು ಶೀಘ್ರವೇ ಆರಂಭಿಸೋದಾಗಿ ತಿಳಿಸಿದ್ದರು. ಹೆಚ್ಚಿನ ಬಡ್ಡಿದರದಲ್ಲಿ ಸಾಲ ಪಡೆದು ಹಣವನ್ನು ಹೊಂದಿಸಿ ಧ್ರುವಗೆ 3.15 ಕೋಟಿ ರೂಪಾಯಿ ಹಣ ನೀಡಿ  2019ರಲ್ಲಿ ಔಪಚಾರಿಕ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಈ ಸಿನಿಮಾದ ಶೂಟ್ ಜನವರಿ 2020ರಲ್ಲಿ ಪ್ರಾರಂಭವಾಗಿ ಜೂನ್ 2020ರೊಳಗೆ ಪೂರ್ಣಗೊಳ್ಳಬೇಕಿತ್ತು. ಹಣವನ್ನು ಪಡೆದ ನಂತರ ಧ್ರುವ ಅವರು ಅವಧಿ ವಿಸ್ತರಿಸಲು ಕೋರಿದರು. ನಂತರ ಕೊವಿಡ್ ಬಂತು. ಕೊವಿಡ್ ಲಾಕ್​ಡೌನ್ ಪೂರ್ಣಗೊಂಡರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ರಾಘವೇಂದ್ರ ಆರೋಪಿಸಿದ್ದಾರೆ.

—-

 

This Article Has 1 Comment
  1. Pingback: no prescription enclomiphene with fedex

Leave a Reply

Your email address will not be published. Required fields are marked *

Translate »
error: Content is protected !!