ವಿಜಯ್‍ ನಿರ್ದೇಶನದ ಚಿತ್ರದಲ್ಲಿ ನಟಿಸಲು ಗಣೇಶ್‍ ಒಪ್ಪಿಗೆ

‘ದುನಿಯಾ’ ವಿಜಯ್‍, ಗಣೇಶ್‍ ಅಭಿನಯದಲ್ಲಿ ಒಂದು ಚಿತ್ರ ನಿರ್ದೇಶಿಸಬೇಕು ಎಂದು  ಆಸೆ ವ್ಯಕ್ತಪಡಿಸಿದ್ದು, ಅದಕ್ಕೆ ಗಣೇಶ್‍  ಒಪ್ಪಿಗೆ ಸೂಚಿಸಿದ್ದಾರೆ.

‘ದುನಿಯಾ’ ವಿಜಯ್‍ ಮತ್ತು ಗಣೇಶ್‍ ಎರಡು ದಶಕಗಳ ಗೆಳೆಯರು. ಸ್ನೇಹಿತರು ಒಟ್ಟಿಗೆ ಸಿಕ್ಕಿ ತಮ್ಮ ಹಳೆಯ ದಿನಗಳನ್ನು ಮೆಲುಕು ಹಾಕುವುದರ ಜೊತೆಗೆ ತಾವು ನಡೆದು ಬಂದ ಹಾದಿಯ ಬಗ್ಗೆ  ವಿಷಯಗಳನ್ನು ಹಂಚಿಕೊಂಡಿದ್ದಾರೆ.

”ನನಗೊಂದು ಆಸೆ ಇದೆ. ನನ್ನ ನಿರ್ದೇಶನದಲ್ಲಿ, ನಮ್ಮಿಬ್ಬರ ಕಾಂಬಿನೇಷನ್‍ನಲ್ಲಿ ಒಂದು ಚಿತ್ರ ಮಾಡಬೇಕು. ಅದು ದಾಖಲೆಯಾಗಿ ಉಳಿಯಬೇಕು. ಎಷ್ಟೇ ದುಃಖ ಇದ್ದರೂ ಮರೆಸಿ ನಗಿಸುವ ತಾಕತ್ತು ನಿನಗಿದೆ. ಎಮೋಷನಲ್‍ ದೃಶ್ಯಗಳಲ್ಲೂ ಅಷ್ಟೇ. ನಿನ್ನ ಸಾಮರ್ಥ್ಯವೇ ಬೇರೆ. ಅದು ನನ್ನಿಂದ ಸಾಧ್ಯವಿಲ್ಲ. ನಿನ್ನಲ್ಲಿರುವ ಆ ಸಾಮರ್ಥ್ಯವನ್ನ ನೋಡಿ, ನಿನ್ನ ಜೊತೆಗೆ ಚಿತ್ರ ಮಾಡಬೇಕು ಎಂಬ ಆಸೆ ಇದೆ. ಒಂದೊಳ್ಳೆಯ ವಿಷಯ ಇಟ್ಟುಕೊಂಡು ಸಿನಿಮಾ ಮಾಡೋಣ. ಯೋಚನೆ ಮಾಡುತ್ತಲೇ ಇದ್ದೇನೆ. ಒಂದು ವಿಷಯ ಸಿಗಬೇಕು ಅಷ್ಟೇ. ಸಿಕ್ಕರೆ ಖಂಡಿತಾ ಬಿಡುವುದು ಬೇಡ. ಒಟ್ಟಿಗೆ ಚಿತ್ರ ಮಾಡೋಣ” ಎಂದು ವಿಜಯ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗಣೇಶ್, ”ನೀನು ಯಾವಾಗ ಹೇಳ್ತೀಯೋ, ನಾನು ಬಂದು ನಟಿಸುವುದಕ್ಕೆ ರೆಡಿ. ನೀನು ಸ್ಕ್ರಿಪ್ಟ್ ಮಾಡು. ನಾವಿಬ್ಬರೂ ಖಂಡಿತವಾಗಿ ಜೊತೆಯಾಗಿ ಕೆಲಸ ಮಾಡೋಣ. ಇಂಥಾ ದಿನ ಶೂಟಿಂಗ್ ಅಂತ ಹೇಳು. ನಾನು ಬರ್ತೀನಿ” ಎಂದು ಹೇಳಿದ್ದಾರೆ.

‘ದುನಿಯಾ’ ವಿಜಯ್‍ ಅಭಿನಯ, ನಿರ್ದೇಶನದ ‘ಭೀಮ’ ಚಿತ್ರವು ಆಗಸ್ಟ್ 9ರಂದು ರಾಜ್ಯಾದ್ಯಂತ ಬಿಡುಗಡೆ ಆಗಿದೆ.  ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ಸ್ನೇಹಿತರು ಒಟ್ಟಿಗೆ ಸಿಕ್ಕಿ ಕನಸು ಹಂಚಿಕೊಂಡಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!