“ಗೋವಿಂದ ಗೋವಿಂದ” ಚಿತ್ರದಲ್ಲಿ ಮಾರ್ಡನ್ ಸುಪ್ರಭಾತ

ಶೈಲೇಂದ್ರ ಪ್ರೊಡಕ್ಷನ್ಸ್ ಹಾಗೂ ಎಲ್.ಜಿ.ಕ್ರಿಯೇಷನ್ಸ್ ಅವರು ರವಿ ಗರಣಿ ಪ್ರೊಡಕ್ಷನ್ಸ್ ಸಹಯೋಗದೊಂದಿಗೆ ನಿರ್ಮಿಸಿರುವ “ಗೋವಿಂದ ಗೋವಿಂದ” ಚಿತ್ರದ ವಿನೂತನ ಶೈಲಿಯ ಹಾಡು ಪುಷ್ಕರ್ ಫಿಲಂಸ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಈ ಹಾಡಿಗೆ ಚಿತ್ರತಂಡ ಮಾರ್ಡನ್ ಸುಪ್ರಭಾತ ಎಂದು ನಾಮಕರಣ ಮಾಡಿದೆ.

ದೇವ್ ರಂಗಭೂಮಿ ಬರೆದಿರುವ ಈ ಹಾಡನ್ನು ಜನಪದ ಗಾಯಕ ಕಡುಬಗೆರೆ ಮುನಿರಾಜು ಹಾಡಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಈ ಹಾಡು ವೀಕ್ಷಕರ ಮನ ಗೆದ್ದಿದೆ. ಚಿತ್ರ ಏಪ್ರಿಲ್ 16 ರಂದು ತೆರೆಗೆ ಬರಲಿದೆ. ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ‌ಕಥಾಹಂದರ ಹೊಂದಿರುವ ಈ ಚಿತ್ರವನ್ನು ತಿಲಕ್ ನಿರ್ದೇಶಿಸಿದ್ದಾರೆ.

ಶೈಲೇಂದ್ರ ಬಾಬು, ಕಿಶೋರ್ ಎಂ.ಕೆ.ಮಧುಗಿರಿ ಹಾಗೂ ರವಿ‌ ಆರ್ ಗರಣಿ ಈ ಚಿತ್ರದ ನಿರ್ಮಾಪಕರು. ಜನಾರ್ದನ್ ರಾಮ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದೇವ್ ರಂಗಭೂಮಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಕೆ.ಎಸ್.ಚಂದ್ರಶೇಖರ್ ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಸಂಕಲನ, ಪ್ರಕಾಶ್ ಪುಟ್ಟಸ್ವಾಮಿ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಸುಮಂತ್ ಶೈಲೇಂದ್ರ ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಕವಿತಾ ಗೌಡ, ಭಾವನ ಮೆನನ್, ರೂಪೇಶ್ ಶೆಟ್ಟಿ, ಪವನ್ ಕುಮಾರ್, ವಿಜಯ್ ಚೆಂಡೂರ್, ಅಚ್ಯುತ ಕುಮಾರ್, ವಿ.ಮನೋಹರ್, ಕೆ.ಮಂಜು, ಕಡ್ಡಿಪುಡಿ ಚಂದ್ರು, ಪದ್ಮಾ ವಾಸಂತಿ, ಶ್ರೀನಿವಾಸಪ್ರಭು, ಗೋವಿಂದೇ ಗೌಡ, ಯಮುನ ಶ್ರೀನಿಧಿ ಮುಂತಾದವರಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!