ನಿರ್ದೇಶನಕ್ಕೆ ಮುಂದಾದ ‘ಅಂಬಿ ನಿಂಗೆ ವಯಸ್ಸಾಯ್ತೋ’ ನಿರ್ದೇಶಕ

‘ಅಂಬಿ ನಿಂಗೆ ವಯಸ್ಸಾಯ್ತೋ’ ನಿರ್ದೇಶಕ  ಗುರುದತ್ ಗಾಣಿಗ 5 ವರ್ಷಗಳ ಬಳಿಕ ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.

ಈ ಬಾರಿ ಗುರುದತ್ ಗಾಣಿಗ ಸ್ಟಾರ್ ನಟನಿಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಹೊಸ ಸಿನಿಮಾದ ಎಲ್ಲಾ ತಯಾರಿ ನಡೆದಿದ್ದು ಸದ್ಯದಲ್ಲೇ ಟೈಟಲ್ ಮತ್ತು ಹೀರೋ ಅನೌನ್ಸ್ ಮಾಡಲು ಪ್ಲಾನ್ ಮಾಡಿದ್ದಾರೆ ಗುರುದತ್ ಗಾಣಿಗ.

ಗುರು ಅವರ 2ನೇ ಸಿನಿಮಾ ದೊಡ್ಡ ಮಟ್ಟದಲ್ಲಿ ಮೂಡಿ ಬರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುರುದತ್ ಗಾಣಿಗ ಇತ್ತೀಚೆಗಷ್ಟೆ ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾದ ನಿರ್ಮಾಪಕರಾಗಿ ಸರ್ಪ್ರೈಸ್ ಎಂಟ್ರಿ ಕೊಟ್ಟರು.

‘ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರ ರೆಬಲ್ ಸ್ಟಾರ್ ಅಂಬರೀಷ್ ಹೀರೋ ಆಗಿ ಮಿಂಚಿದ್ದ ಕೊನೆಯ ಸಿನಿಮಾ. 2018ರಲ್ಲಿ ರಿಲೀಸ್ ಆ ಚಿತ್ರ ಬಿಡುಗಡೆಯಾಗಿತ್ತು. ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾದಲ್ಲಿ ಅಂಬಿ ಜೊತೆಗೆ ಕಿಚ್ಚ ಸುದೀಪ್ ಕೂಡ ನಟಿಸಿದ್ದರು.

ಅಂಬರೀಷ್ ಅವರ ಯವ್ವನದ ಪಾತ್ರಕ್ಕೆ ಬಣ್ಣ ಹಚ್ಚಿದ್ದರು. ಸುಹಾಸಿನಿ, ಶ್ರುತಿ ಹರಿಹರನ್ ಹೀಗೆ ಆ ಸಿನಿಮಾದಲ್ಲಿ ದೊಡ್ಡ ತಾರಾಬಳಗ ಇತ್ತು. ಗುರುದತ್ ಗಾಣಿಗ ದೊಡ್ಡ ಸ್ಟಾರ್‌ಗಳಿಗೆ ಆಕ್ಷನ್ ಕಟ್ ಹೇಳಿ ಸ್ಯಾಂಡಲ್‌ವುಡ್‌ನ ಭರವಸೆಯ ನಿರ್ದೇಶಕರಾಗಿ ಹೊರಹೊಮ್ಮಿದ್ದರು.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!