ಕನ್ನಡದ ಗೀತ ಸಾಹಿತಿ, ಸಾಹಿತಿ, ಕವಿ ಕಥೆಗಾರ, ಸಂಭಾಷಣಕಾರ ಎಚ್ಎಸ್ ವೆಂಕಟೇಶಮೂರ್ತಿ ನಿಧನ ಹೊಂದಿದ್ದಾರೆ.
ಅವರಿಗೆ 80 ವರ್ಷ ವಯಸ್ಸಾಗಿತ್ತು. ಎಚ್ಎಸ್ ವೆಂಕಟೇಶಮೂರ್ತಿ ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಎಚ್ಎಸ್ ವೆಂಕಟೇಶಮೂರ್ತಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ, ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎ ಪದವಿ ಪಡೆದರು. ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ನೇಮಕ ಆದರು. 2000ರಲ್ಲಿ ಅವರು ನಿವೃತ್ತಿ ಹೊಂದಿದರು.
ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ‘ಚಿನ್ನಾರಿ ಮುತ್ತ’ಗೆ ಎಚ್ಎಸ್ ವೆಂಕಟೇಶಮೂರ್ತಿ ಕಥೆ, ಸಂಭಾಷಣೆ ಹಾಗೂ ಎಲ್ಲಾ ಹಾಡುಗಳನ್ನು ಬರೆದಿದ್ದರು. ‘ಅಮೆರಿಕ ಅಮೆರಿಕ’ ಚಿತ್ರದ ‘ಬಾನಲ್ಲಿ ಓಡೋ ಮೋಡ..’ ಇವರ ಹಾಡು . ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಬಳಕೆ ಆದ ‘ತೂಗು ಮಂಚದಲ್ಲಿ ಕೂತು..’ ವೆಂಕಟೇಶಮೂರ್ತಿ ಬರೆದ ಹಾಡು. ಪುನೀತ್ ನಟನೆಯ ‘ಮೈತ್ರಿ’ ಚಿತ್ರಕ್ಕೆ ಹಾಡು ಬರೆದಿದ್ದರು. ವೆಂಕಟೇಶಮೂರ್ತಿ ರಚಿಸಿದ ‘ಮುಕ್ತ’ ಧಾರಾವಾಹಿಯ ಟೈಟಲ್ ಸಾಂಗ್ ಸಾಕಷ್ಟು ಜನಪ್ರಿಯತೆ ಪಡೆದಿದೆ.
ವೆಂಕಟೇಶಮೂರ್ತಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಆಗಿದ್ದರು. ಸಾಹಿತ್ಯ ಲೋಕ ಹಾಗೂ ಚಿತ್ರ ಲೋಕಕ್ಕೆ ನೀಡಿದ ಕೊಡುಗೆಗಾಗಿ ಅನೇಕ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.
——

Be the first to comment