“ಇದು ಆಕಾಶವಾಣಿ ಬೆಂಗಳೂರು ನಿಲಯ’ ಚಿತ್ರದ ಡಬ್ಬಿಂಗ್ ಕಂಪ್ಲೀಟ್

ಇತ್ತೀಚೆಗೆ ನಿರ್ಮಾಣವಾಗಿ ತೆರೆಗೆ ಬರುತ್ತಿರುವ ಚಲನಚಿತ್ರಗಳ ಶೀರ್ಷಿಕೆಗಳೇ ವಿಭಿನ್ನವಾಗಿದ್ದು ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆಯುವಂತಿರುತ್ತವೆ.ಅಂಥದೇ ಶೀರ್ಷಿಕೆಯ ಮತ್ತೊಂದು ಚಿತ್ರ ತೆರೆಗೆ ಬರಲು ರೆಡಿಯಾಗುತ್ತಿದೆ.  ಆ ಚಿತ್ರದ ಹೆಸರು ಇದು ಆಕಾಶವಾಣಿ ಬೆಂಗಳೂರು ನಿಲಯ.

ಕಮಲಾನಂದ ಚಿತ್ರಾಲಯ ಸಂಸ್ಥೆಯಡಿ ಶಿವಾನಂದಪ್ಪ ಬಳ್ಳಾರಿ (ಮಿಸ್ಟರ್ ಎಇಜಿ) ಹಾಗೂ ಅವರ ಸಂಗಡಿಗರೆಲ್ಲ ಸೇರಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಬೆಂಗಳೂರು, ತಿಪಟೂರು ಹಾಗೂ ನೊಣವಿನಕೆರೆ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

ಅಲ್ಲದೆ ಈ ಚಿತ್ರದ ಚಿತ್ರದ ಡಬ್ಬಿಂಗ್ ಕಾರ್ಯ ಕೂಡ ಮುಕ್ತಾಯಗೊಂಡಿದೆ. ಈ ಹಿಂದೆ ನಾವೇ ಭಾಗ್ಯವಂತರು ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಎಂ. ಹರಿಕೃಷ್ಣ ಅವರ ನಿರ್ದೇಶನದ ಎರಡನೇ ಚಿತ್ರ ಇದಾಗಿದೆ.

ಒಂದು ವಿಭಿನ್ನವಾದ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸುಮ್‍ಸುಮ್ನೆ ವಿಜಯಕುಮಾರ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ಬರೆದಿದ್ದು, ಎ.ಟಿ. ರವೀಶ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಆಂಟೋನಿ ಎಂ, ಶಿವರಾಜ್‍ಗುಬ್ಬಿ ಅವರ ಸಾಹಿತ್ಯ, ಪ್ರವೀಣ್ ಶೆಟ್ಟಿ ಅವರ ಛಾಯಾಗ್ರಹಣ, ಪವನ್‍ಗೌಡ ಅವರ ಸಂಕಲನ, ಕಂಬಿರಾಜು ಅವರ ನೃತ್ಯ ನಿರ್ದೇಶನ, ಆರ್.ಪ್ರಭಾಕರ್ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ. ಅಲ್ಲದೆ ನಿಖಿತಸ್ವಾಮಿ, ರನ್ ವೀರ್ ಪಾಟೀಲ್, ಸುಚೇಂದ್ರ ಪ್ರಸಾದ್, ಟೆನ್ನಿಸ್ ಕೃಷ್ಣ, ಎಸ್.ನಾರಾಯಣಸ್ವಾಮಿ, ದಿವ್ಯಶ್ರೀ(ಕಾಮಿಡಿ ಕಿಲಾಡಿಗಳು) ಮುಂತಾದವರ ತಾರಾಬಳಗವಿರುವ ಈ ಚಿತ್ರದ ಹಾಡುಗಳ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಸದ್ಯದಲ್ಲೇ ನಡೆಯಲಿದೆ ಎಂದು ಚಿತ್ರದ ನಿರ್ಮಾಪಕ ಶಿವಾನಂದಪ್ಪ ಬಳ್ಳಾರಿ ಅವರು ತಿಳಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!