ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ ನೀಡಿದ ನಾರಾಯಣಮೂರ್ತಿ ದಂಪತಿ.

ಇನ್ಫೋಸಿಸ್ ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿಗಿರಿವಾಸನಾದ ಶಂಖಚಕ್ರಧಾರಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ಮೊದಲಿನಿಂದಲೂ ಸರಳ ಜೀವನ ನಡೆಸುತ್ತಾ ಅನೇಕರಿಗೆ ಮಾಧರಿಯಾಗಿದ್ದಾರೆ. ಅವರ ದಾಂಪತ್ಯ ಜೀವನಕ್ಕೆ ಈಗ ನಲವತ್ತೈದು ವರ್ಷ. ಈ ನಲವತ್ತು ವರ್ಷಗಳಲ್ಲಿ ತಮ್ಮ ಬಳಿಯಿದ್ದ ಕೆಲವೇ ಕೆಲವು ಆಭರಣಗಳಿಂದ ಈ ಬಂಗಾರದ ಶಂಖವನ್ನು ಮಾಡಿಸಿ ತಿಮ್ಮಪ್ಪನಿಗೆ ನೀಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!