‘ಜನ ನಾಯಗನ್’ ಕೋರ್ಟ್ ಪ್ರಕರಣ ಹಿಂದಕ್ಕೆ?

ವಿಜಯ್ ನಾಯಕನಾಗಿ ಅಭಿನಯಿಸಿದ ‘ಜನ ನಾಯಗನ್’ ಸಿನಿಮಾತಂಡ ಕೋರ್ಟ್ ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಸೆನ್ಸಾರ್ ಅನುಮತಿ ಸಿಗದ ಹಿನ್ನೆಲೆಯಲ್ಲಿ ನಿರ್ಮಾಣ ಸಂಸ್ಥೆ ಕೆವಿಎನ್  ಕೋರ್ಟ್ ಮೆಟ್ಟಿಲೇರಿತ್ತು. ಸ್ಥಳೀಯ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ಗಳಲ್ಲಿ ಪ್ರಕರಣ ದಾಖಲಿಸಿದರೂ ಯಾವುದೇ ಪರಿಹಾರ ಸಿಕ್ಕಿಲ್ಲ. ಈಗ ಚಿತ್ರ ತಂಡ ಕೋರ್ಟ್ ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿದೆ.

ತಮಿಳುನಾಡು ಸೆನ್ಸಾರ್ ಮಂಡಳಿ ಸಿನಿಮಾದ ಕೆಲ ವಿಷಯಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ರಿವ್ಯೂ ಸಮಿತಿಗೆ ಕಳುಹಿಸುವ ಸೂಚನೆ ನೀಡಿತ್ತು. ಆದರೆ  ಸಿನಿಮಾತಂಡ ಮೊದಲಿಗೆ ಕೋರ್ಟ್ ಮಾರ್ಗ ಆಯ್ಕೆ ಮಾಡಿತ್ತು. ಸಿನಿಮಾತಂಡ ಈಗ  ಚಿತ್ರವನ್ನು ಪುನರ್ವಿಮರ್ಶಾ ಸಮಿತಿಗೆ ಕಳುಹಿಸುವ ಮೂಲಕ ಪರಿಹಾರ ಕಂಡುಕೊಳ್ಳಬೇಕೆಂಬ ನಿರ್ಧರಿಸಿದೆ.

‘ಜನ ನಾಯಗನ್’ ಚಿತ್ರಕ್ಕೆ  500 ಕೋಟಿ ರೂಪಾಯಿ ಬಜೆಟ್ ವ್ಯಯಿಸಲಾಗಿದೆ ಎಂದು ನಿರ್ಮಾಣ ಸಂಸ್ಥೆ ಕೋರ್ಟ್‌ನಲ್ಲಿ ಉಲ್ಲೇಖಿಸಿತ್ತು. ಈ ಚಿತ್ರ  ವಿಜಯ್  ಅವರ ವೃತ್ತಿಜೀವನದ ಕೊನೆಯ ಸಿನಿಮಾ ಎನ್ನಲಾಗಿದೆ. ಚಿತ್ರದ ನಂತರ ವಿಜಯ್ ರಾಜಕೀಯ ಪ್ರವೇಶಿಸುವ ನಿರೀಕ್ಷೆ ಇದೆ.

‘ಜನ ನಾಯಗನ್’ ಸಿನಿಮಾ ಜನವರಿ 9ರಂದು ಬಿಡುಗಡೆಯಾಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿ  ಪ್ರಮಾಣಪತ್ರ ನೀಡದಿರುವುದರಿಂದ ಚಿತ್ರದ ಬಿಡುಗಡೆ  ವಿಳಂಬವಾಗಿದೆ. ಚಿತ್ರದಲ್ಲಿ ಮಮಿತಾ ಬೈಜು, ಪೂಜಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಚ್. ವಿನೋದ್ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!