ಜೇಮ್ಸ್ ನೋಡಿ ಉಪ್ಪಿ ಅಂದಿದ್ದೇನು?

“ಓರ್ವ ನಿರ್ದೇಶಕನಾಗಿ ನಾನು ಗೋಲ್ಡನ್ ಅವಕಾಶವನ್ನು ಮಿಸ್ ಮಾಡಿಕೊಂಡೆ. ಅಪ್ಪು ಅವರಿಗೆ ಆಕ್ಷನ್ ಕಟ್​ ಹೇಳುವ ಅವಕಾಶ ನನಗೆ ಸಿಗಲೇ ಇಲ್ಲ” ಎಂದು ನಿರ್ದೇಶಕ ಉಪೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಅಪ್ಪು ಕೊನೆಯ ಚಿತ್ರ ಜೇಮ್ಸ್ ಬಗ್ಗೆ ಮಾತನಾಡಿರುವ ಅವರು, “ಜೇಮ್ಸ್ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಆಕ್ಷನ್ ದೃಶ್ಯ ರೋಮಾಂಚನಕಾರಿಯಾಗಿದೆ. ಇಂಟರ್​ವಲ್​ ಟ್ವಿಸ್ಟ್​ಗೆ ಥ್ರಿಲ್​ ಆಗಿಬಿಟ್ಟೆ” ಎಂದು ಚಿತ್ರ ವೀಕ್ಷಿಸಿ ಉಪೇಂದ್ರ ಅಭಿಪ್ರಾಯ ಪಟ್ಟಿದ್ದಾರೆ.

ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಮಾರ್ಚ್ 17ರಂದು ಪುನೀತ್ ಅವರ ಹುಟ್ಟು ಹಬ್ಬದ ದಿನದಂದು ಬಿಡುಗಡೆ ಆಗಿದೆ. ಕೇವಲ ನಾಲ್ಕು ದಿನದಲ್ಲಿ ಈ ಚಿತ್ರ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ದಾಖಲೆ ಬರೆದಿದೆ. ಚೇತನ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ.
ನಟ ಉಪೇಂದ್ರ ಸಾಕಷ್ಟು ಬಿಜಿ ಆಗಿದ್ದು ಆರ್.ಚಂದ್ರು ನಿರ್ದೇಶನದ ಬಿಗ್ ಬಜೆಟ್ ಸಿನಿಮಾ ‘ಕಬ್ಜ’ದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಎರಡು ಭಾಗಗಳಲ್ಲಿ ತೆರೆಗೆ ಬರಲಿದ್ದು, ಮುಖ್ಯ ಪಾತ್ರದಲ್ಲಿ ಸುದೀಪ್ ನಟಿಸಿದ್ದಾರೆ.
ಉಪೇಂದ್ರ ತಮ್ಮದೇ ನಿರ್ದೇಶನದ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ಉಪ್ಪಿ ನಟನೆಯ ‘ಹೋಮ್ ಮಿನಿಸ್ಟರ್’ ಸಿನಿಮಾ ಏಪ್ರಿಲ್ 1 ರಂದು ತೆರೆಗೆ ಬರಲಿದೆ. ಅಲ್ಲದೇ ಉಪ್ಪಿ ಅಭಿನಯದ ತೆಲುಗು ಸಿನಿಮಾ ‘ಗನಿ’ ಏಪ್ರಿಲ್ 8 ರಂದು ತೆರೆ ಕಾಣಲಿದೆ.
ಕರ್ನಾಟಕದಲ್ಲಿ ಸುಮಾರು 350ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಹೋಮ್ ಮಿನಿಸ್ಟರ್’ ಚಿತ್ರ ಬಿಡುಗಡೆ ಆಗುತ್ತಿದೆ. ಚಿತ್ರವನ್ನು ಬೆಂಗಳೂರು ಕುಮಾರ್ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಸುಜಯ್ ಕೆ. ಶ್ರೀಹರಿ ನಿರ್ದೇಶನ, ಕುಂಟುನಿ ಎಸ್. ಕುಮಾರ್ ಛಾಯಾಗ್ರಹಣ ಇದೆ. ಸಂಭಾಷಣೆಯನ್ನು ಧರ್ಮೇಂದ್ರ ಬರೆದಿದ್ದಾರೆ.
ಚಾಂದಿನಿ, ಬೇಬಿ ಆದ್ಯಾ, ಸುಮನ್ ರಂಗನಾಥ್, ಸಾಧುಕೋಕಿಲ, ಶ್ರೀನಿವಾಸ ಮೂರ್ತಿ, ಸುಧಾ ಬೆಳವಾಡಿ, ತಿಲಕ್, ಅವಿನಾಶ್, ಮಾಳವಿಕಾ ಅವಿನಾಶ್, ಲಾಸ್ಯಾ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.
ಉಪೇಂದ್ರ ನಟಿಸಿರುವ ‘ತ್ರಿಶೂಲಂ’, ‘ಬುದ್ಧಿವಂತ 2’ ಹಾಗೂ ‘ಲಗಾಮ್’ ಸಿನಿಮಾಗಳು ಇನ್ನಷ್ಟೇ ಬಿಡುಗಡೆ ಆಗಬೇಕಿವೆ.
________

Be the first to comment

Leave a Reply

Your email address will not be published. Required fields are marked *

Translate »
error: Content is protected !!