“ಕಡಲೂರ ಕಣ್ಮಣಿ ” ಟ್ರೇಲರ್ ರಿಲೀಸ್

ಜುಲೈ 19 ರಂದು ಬಿಡುಗಡೆಗೊಳ್ಳುತ್ತಿರುವ “ಕಡಲೂರ ಕಣ್ಮಣಿ” ಚಿತ್ರದ ಟ್ರೈಲರ್ ನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ  ಟೈಗರ್ ವೆಂಕಟೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.‌

ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡಿರುವ ರಾಮ್ ಪ್ರಸನ್ನ ಹುಣಸೂರು ಮಾತನಾಡುತ್ತಾ, ” ಈ ಚಿತ್ರ ಒಂದು ಮನಮುಟ್ಟುವ ಪ್ರೇಮಕಥಾಹಂದರ. ಈವರೆಗೂ ಸಾಕಷ್ಟು ಪ್ರೇಮಕಥೆಗಳು ಬಂದಿವೆಯಾದರೂ ಇದು ವಿಭಿನ್ನ ಪ್ರೇಮಕಥೆ ಎನ್ನಬಹುದು. ಇದೇ ತಂಡದೊಂದಿಗೆ “ಕಡಲೂರ ಕಣ್ಮಣಿ” ಎರಡನೇ ಭಾಗದಲ್ಲಿ ತರುವ ಸಿದ್ದತೆ ನಡೆಯುತ್ತಿದೆ.  ಈ ಚಿತ್ರದಲ್ಲಿ ಪ್ರೀತಿ , ಬದುಕು , ಸಂಬಂಧದ ಜೊತೆಗೆ ಕಡಲ ಒಡಲಲ್ಲಿ ನಡೆಯುವ ಕೆಲವು ಘಟನೆಗಳನ್ನು ತೋರಿಸಲಾಗಿದೆ. ಇದೇ 19ರಂದು ನಮ್ಮ ಚಿತ್ರ ಬಿಡುಗಡೆ ಆಗುತ್ತಿದೆ. ನಿಮ್ಮೆಲ್ಲರ ಪ್ರೀತಿ ಸಹಕಾರ ಇರಲಿ” ಎಂದು ಕೇಳಿಕೊಂಡರು.

ಚಿತ್ರದ ನಾಯಕ ಅರ್ಜುನ್ ನಗರ ಕರ್ ಮಾತನಾಡುತ್ತಾ, ” ನಿರ್ದೇಶಕರು ಕೊಟ್ಟ ಗಿಫ್ಟ್ ನನ್ನ ಜೀವನದಲ್ಲಿ ಮರಿಯೋದಿಲ್ಲ. ಈ ಚಿತ್ರಕ್ಕಾಗಿ ಬಹಳಷ್ಟು ಶ್ರಮವಟ್ಟು ಕೆಲಸ ಮಾಡಿದ್ದೇವೆ. ನಾನು ಈ ಹಿಂದೆ ವರ್ಣಪಟಲ ಸೇರಿದಂತೆ ಕೆಲವು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದೆ. ಇದು ನನ್ನ ಪೂರ್ಣ ಪ್ರಮಾಣದ ನಾಯಕನಾಗಿ ಅಭಿನಯಿಸಿರುವ ಚಿತ್ರ. ಅವಕಾಶ ನೀಡಿದ ನಿರ್ದೇಶಕ ಹಾಗು ನಿರ್ಮಾಪಕರಿಗೆ ಧನ್ಯವಾದ” ಎಂದರು‌.

ನಿರ್ಮಾಪಕರಾದ ಕೊಳ ಶೈಲೇಶ್ ಆರ್ ಪೂಜಾರಿ ಮಾತನಾಡುತ್ತಾ, ” ನಿರ್ದೇಶಕರು ನಮ್ಮ ಆತ್ಮೀಯರು ಅವರಿಗಾಗಿ ಈ ಚಿತ್ರವನ್ನು ನಿರ್ಮಿಸಿದ್ದೇವೆ. ರಾಮ್ ಪ್ರಸನ್ನ ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆವು ಎಂದರು.

ಮತ್ತೊಬ್ಬ ನಿರ್ಮಾಪಕ ಬಸವರಾಜ್ ಗಚ್ಚಿ, ಸಹ ನಿರ್ಮಾಪಕ ಮಹೇಶ್ ಕುಮಾರ್ ಎಂ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಚಿತ್ರದ ಆಕ್ಷನ್ ಸನ್ನಿವೇಶಗಳ ಬಗ್ಗೆ ಚಂದ್ರು ಬಂಡೆ ಮಾಹಿತಿ ನೀಡಿದರು.

ಚಿತ್ರವನ್ನು 50ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಡಿ.ಎಸ್‌.ಕೆ ಸಿನಿಮಾಸ್ ಸಂಸ್ಥೆಯ ಸುನೀಲ್ ಕುಂಬಾರ್ ಬಿಡುಗಡೆ ಮಾಡುತ್ತಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!